‘ರುದ್ರಯ್ಯ ಅವರು ಕಾಂಗ್ರೆಸ್ ನಾಯಕ ಮಲ್ಲಿಕಾರ್ಜುನ ಖರ್ಗೆ ಅವರ ಆಪ್ತರು. ಹೀಗಾಗಿ ಅವರ ಬದಲು ನಿವೃತ್ತ ಸೂಪರಿಂಟೆಂಡಿಂಗ್ ಎಂಜಿನಿಯರ್ ಎನ್. ಕ್ಷೇತ್ರಪಾಲ್ ಅವರನ್ನು ನೇಮಕ ಮಾಡಬೇಕು’ ಎಂದು ಗುತ್ತಿಗೆದಾರರೊಬ್ಬರು ಹಾಗೂ ಇಬ್ಬರು ಮುಖ್ಯ ಎಂಜಿನಿಯರ್ಗಳು ಮುಖ್ಯಮಂತ್ರಿ ಸಚಿವಾಲಯಕ್ಕೆ ದೂರು ನೀಡಿದರು. ಕ್ಷೇತ್ರಪಾಲ್ ನೇಮಕಕ್ಕೆ ಮುಖ್ಯಮಂತ್ರಿ ಸಚಿವಾಲಯದಲ್ಲಿ
ಕಡತ ಸಿದ್ಧವಾಗಿದೆ. ಇದಕ್ಕೆ ಸಚಿವರು ಆಕ್ಷೇಪ ವ್ಯಕ್ತಪಡಿಸಿದ್ದು, ರುದ್ರಯ್ಯ ಅವರನ್ನೇ ನೇಮಿಸುವಂತೆ ಪಟ್ಟು ಹಿಡಿದಿದ್ದಾರೆ ಎಂದು ಉನ್ನತ ಮೂಲಗಳು ತಿಳಿಸಿವೆ.