ಮಂಗಳವಾರ, 7 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕುಮಾರಸ್ವಾಮಿ ಸೂಚನೆಯಂತೆ ನಮ್ಮ ಫೋನ್ ಕರೆಗಳು ಕದ್ದಾಲಿಕೆಯಾಗಿವೆ: ವಿಶ್ವನಾಥ್ 

Last Updated 14 ಆಗಸ್ಟ್ 2019, 7:32 IST
ಅಕ್ಷರ ಗಾತ್ರ

ಮೈಸೂರು: ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ 17 ಮಂದಿಯ ಫೋನ್ ಕರೆಗಳು ಕದ್ದಾಲಿಕೆ ಆಗಿದ್ದು, ಸಮಗ್ರ ತನಿಖೆ ನಡೆಸಬೇಕೆಂದು ಮಾಜಿ ಸಚಿವ ಎಚ್.ವಿಶ್ವನಾಥ್ ಆಗ್ರಹಿಸಿದರು.

‘ಹಿಂದಿನ ಮುಖ್ಯಮಂತ್ರಿ ಕುಮಾರಸ್ವಾಮಿ ಅವರ ಕಚೇರಿಯಿಂದಲೇ ನಮ್ಮ ಫೋನ್ ಕದ್ದಾಲಿಕೆ ಮಾಡಲು ಸೂಚನೆ ಹೋಗಿದೆ. ಇದೊಂದು ನೀಚ ಕೆಲಸ' ಎಂದು ಪತ್ರಿಕಾಗೋಷ್ಠಿಯಲ್ಲಿ ಆರೋಪಿಸಿದರು.

‘ರಾಜೀನಾಮೆ ನೀಡಿದ ನಮಗೆ ಕರೆ ಮಾಡಿ ನಿಮ್ಮ ದಾಖಲೆಗಳೆಲ್ಲ ಸಿಕ್ಕಿವೆ, ವಾಪಸ್ ಬನ್ನಿ ಎನ್ನುತ್ತಿದ್ದರು. ಮುಖ್ಯಮಂತ್ರಿ ಕಚೇರಿಯಿಂದ ಕರೆ ಬರುತ್ತಿತ್ತು. ಇದರ ಬಗ್ಗೆ ಮುಖ್ಯಮಂತ್ರಿ ಯಡಿಯೂರಪ್ಪ ಕ್ರಮ ಕೈಗೊಳ್ಳಬೇಕು. ಕೇಂದ್ರ ಸರ್ಕಾರ ಕೂಡ ಇದರ ಬಗ್ಗೆ ಯೋಚನೆ ಮಾಡಬೇಕು,’ ಎಂದು ವಿನಂತಿಸಿದರು.

'ಹಿಂದಿನ ಗೃಹ ಸಚಿವರು, ಐಪಿಎಸ್ ಅಧಿಕಾರಿಗಳು ಸೇರಿದಂತೆ ಸುಮಾರು 300 ಮಂದಿಯ ಫೋನ್ ಕದ್ದಾಲಿಕೆ ಆಗಿದೆ. ಆರು ತಿಂಗಳಿಂದ ಈ ಕೆಲಸ ನಡೆಯುತ್ತಿದೆ‌' ಎಂದೂ ಅವರು ದೂರಿದರು.

ಸುದ್ದಿಗೋಷ್ಠಿಗೆ ಬಿಗಿ ಭದ್ರತೆ

ಸುದ್ದಿಗೋಷ್ಠಿ ವೇಳೆ ಗಲಾಟೆಯಾಗುವ ಸಾಧ್ಯತೆಯಿಂದ ಬಿಗಿ ಭದ್ರತೆ ಒದಗಿಸಲಾಗಿತ್ತು. ಒಂದು ತುಕಡಿ ಸಿಎಆರ್, ಕೆಎಸ್ಆರ್‌ಪಿ ಹಾಗೂ 20ಕ್ಕೂ ಹೆಚ್ಚು ಪೊಲೀಸ್ ಸಿಬ್ಬಂದಿ ನಿಯೋಜನೆ ಮಾಡಲಾಗಿತ್ತು. ಕಳೆದ ಬಾರಿಯೂ ಸುದ್ದಿಗೋಷ್ಠಿ ವೇಳೆ ಬಿಗಿ ಭದ್ರತೆ ನೀಡಲಾಗಿತ್ತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT