ಇಲ್ಲಿ ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿದ ಅವರು ಲಾಕ್ಡೌನ್ ಸಡಿಲಿಕೆಯಿಂದಾಗಿ ಹೊರರಾಜ್ಯಗಳಿಂದ ಜನ ಬರುತ್ತಿರುವ ಕಾರಣ ಕೊರೊನಾ ಸೋಂಕಿನ ಪ್ರಕರಣಗಳು ಹೆಚ್ಚಾಗುತ್ತಿವೆ. ಈ ನಿಟ್ಟಿನಲ್ಲಿ ಸರ್ಕಾರ ಅನೇಕ ಮುಂಜಾಗ್ರತಾ ಕ್ರಮಗಳನ್ನು ಅನುಸರಿಸುತ್ತಿದೆ. ಸರ್ಕಾರ ಅಗತ್ಯ ಸೌಲಭ್ಯಗಳನ್ನೂ ಒದಗಿಸುವ ಮೂಲಕ ಸೋಂಕು ಹರಡುವುದನ್ನು ತಡೆಗಟ್ಟುವ ಕಾರ್ಯ ಮಾಡುತ್ತಿದೆ ಎಂದರು.