ಬೆಂಗಳೂರಿನ ಬೆಳ್ಳಂದೂರು ಕೆರೆ ಕಲುಷಿತಗೊಂಡು ನೊರೆ ಕಾಣಿಸಿಕೊಂಡಿತ್ತು. ಹೊರ ರಾಜ್ಯಗಳಿಂದ ಬಂದ ಜನರು ರಾಸಾಯನಿಕಯುಕ್ತ ನೊರೆಯನ್ನು ಕಂಡು ಬಹುಶಃ ಅದು ಹಿಮ ಎಂದೇ ಭಾವಿಸಿದ್ದರು. ಆದರೂ ರಾಜ್ಯ ಸರ್ಕಾರ ಕೆರೆಯ ಪುನಶ್ಚೇತನಕ್ಕೆ ಕ್ರಮ ಕೈಗೊಂಡಿಲ್ಲ ಎಂದು ಆರೋಪಿಸಿದ ಅವರು, ಕೂಡಲೇ ಕೇಂದ್ರ ಸರ್ಕಾರ ಬೆಂಗಳೂರಿನಕೆರೆಗಳನ್ನು ತನ್ನ ಸುಪರ್ದಿಗೆ ಪಡೆದು ಅಭಿವೃದ್ಧಿಪಡಿಸಬೇಕು ಎಂದು ಕೋರಿದರು.