ಕೊರೋನಾ ಹೋರಾಟದಲ್ಲಿ ಬೇರೆ ಬೇರೆ ಆಯಾಮಗಳು ಬರುತ್ತವೆ, ಸಂದರ್ಭಕ್ಕೆ ತಕ್ಕಂತೆ ಸರ್ಕಾರ ನಿರ್ಧಾರ ಕೈಗೊಳ್ಳಬೇಕಾಗುತ್ತದೆ. ಪಾದರಾಯನಪುರ ಆರೋಪಿಗಳನ್ನು ಬೆಂಗಳೂರಿನ ಹಜ್ ಭವನಕ್ಕೆ ಶಿಫ್ಟ್ ಮಾಡುತ್ತೇವೆ. ಇದಕ್ಕಾಗಿ ಎಲ್ಲಾ ಅಗತ್ಯ ತಯಾರಿ ಮಾಡಿಕೊಳ್ಳುತ್ತಿದ್ದೇವೆ. ಜೈಲು ಸಿಬ್ಬಂದಿಗೂ ಪರೀಕ್ಷೆ ಮಾಡಿ ಕ್ವಾರಂಟೈನ್ಗೂ ಒಳಪಡಿಸುತ್ತೇವೆ.ಇಲ್ಲೂ ಪೊಲೀಸರಿಗೆ ತಪಾಸಣೆ ಮಾಡಿ ಅಗತ್ಯಬಿದ್ದರೆಕ್ವಾರಂಟೈನ್ ಮಾಡ್ತೇವೆಎಂದು ಶುಕ್ರವಾರ ಇಲ್ಲಿ ಮಾಧ್ಯಮದವರಿಗೆ ತಿಳಿಸಿದರು.