ಶನಿವಾರ, 27 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಪಾದರಾಯನಪುರದಲ್ಲಿ ಗೂಂಡಾಗಿರಿ ನಡೆದಿದೆ, ಜಮೀರ್ ಅಹ್ಮದ್ ಯಾರು: ಮುಖ್ಯಮಂತ್ರಿ

Last Updated 20 ಏಪ್ರಿಲ್ 2020, 6:22 IST
ಅಕ್ಷರ ಗಾತ್ರ

ಬೆಂಗಳೂರು:ಪಾದರಾಯನಪುರದಲ್ಲಿ ಗೂಂಡಾಗಿರಿ ನಡೆದಿದೆ.‌ ಕಾನೂನು ಸುವ್ಯವಸ್ಥೆ ಕಾಪಾಡಲು ಕಠಿಣ ಕ್ರಮ ಜರುಗಿಸಲು ಸೂಚಿಸಲಾಗಿದೆ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹೇಳಿದ್ದಾರೆ.

ಸೋಮವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಗಲಭೆ ಸಂಬಂಧ ಇದುವರೆಗೆ 54 ಮಂದಿಯನ್ನುಬಂಧಿಸಲಾಗಿದೆ. ಶೀಘ್ರದಲ್ಲೇ ‌ಮತ್ತಷ್ಡು ಕಿಡಿಗೇಡಿಗಳನ್ನು ಬಂಧಿಸಲಾಗುವುದು ಎಂದು ಹೇಳಿದರು.

ಕಾನೂನು ಕೈಗೆತ್ತಿಕೊಳ್ಳುವವರ ವಿರುದ್ದ ಕಠಿಣ ‌ಕ್ರಮ‌ ಜರುಗಿಸಲು ಪೊಲೀಸ್ ಅಧಿಕಾರಿಗಳಿಗೆ ಸೂಚಿಸಲಾಗಿದೆ. ಗೂಂಡಾಗಿರಿ ಪ್ರವೃತ್ತಿಯನ್ನು ಸರ್ಕಾರ ಎಂದಿಗೂ ಸಹಿಸುವುದಿಲ್ಲ.‌

ಸರ್ಕಾರ ಮಾಡುವ ಕೆಲಸಕ್ಕೆ ಜಮೀರ್ ಅಹ್ಮದ್ ಅನುಮತಿ ಯಾಕೆ ಕೇಳಬೇಕು. ಅವರು ಯಾರು. ಅವರ ಹೇಳಿಕೆ ನೋಡಿದರೆ ಇಂತಹ ಗಲಭೆಗೆ‌ ಅವರೇ ಪ್ರಚೋದನೆ ‌ನೀಡುತ್ತಿದ್ದಾರೆಂದು ಭಾವಿಸಬೇಕೆ? ರಾಜ್ಯದಲ್ಲಿ ಇಂತಹ ಘಟನೆ ನಡೆದಿರಲಿಲ್ಲ. ಈ ರೀತಿಯ ಗೂಂಡಾ ಪ್ರವೃತ್ತಿ ಸಹಿಸುವ ಪ್ರಶ್ನೆ ‌ಇಲ್ಲ.‌ ಇದರಲ್ಲಿ ಯಾವ ಧರ್ಮ, ಜಾತಿಯ ಪ್ರಶ್ನೆಯಿಲ್ಲ.‌ ಗೂಂಡಾಗಿರಿ ಮಾಡುವವರ ವಿರುದ್ದ ಮುಲಾಜಿಲ್ಲದೆ ಕ್ರಮ ಜರುಗಿಸಲಾಗುವುದು ಎಂದು ಹೇಳಿದ್ದಾರೆ.

ಸಚಿವ ಸಿ.ಟಿ.ರವಿ ಹೇಳಿಕೆ

ಪಾದರಾಯನಪುರದಲ್ಲಿ ವೈದ್ಯಕೀಯ ಹಾಗೂ ಪೊಲೀಸ್ ಸಿಬ್ಬಂದಿ ವಿರುದ್ದ ದೌರ್ಜನ್ಯ ನಡೆಸುವ ಪ್ರಯತ್ನ ಮಾಡಿದವರನ್ನು ಮುಲಾಜಿಲ್ಲದೆ ಬಂಧಿಸಿ ಕಠಿಣ‌‌ ಕ್ರಮ ಜರುಗಿಸಬೇಕು.‌ ಇಂತಹವರ ನಿಯಂತ್ರಿಸದಿದ್ದರೆ ಸರ್ಕಾರ ಹಾಗೂ ಪೊಲೀಸ್ ಇಲಾಖೆಗೆ ಕೆಟ್ಟ ಹೆಸರು ಬರುತ್ತದೆ.‌ ಹೀಗಾಗಿ ಈ ರೀತಿ ಪುಂಡಾಟ ಮಾಡಿದವರನ್ನು ಕೂಡಲೇ ಬಂಧಿಸಿ ಕಠಿಣ ಕ್ರಮ ಜರುಗಿಸಬೇಕು. ಗೃಹ ಸಚಿವರು ಇಂತಹವರನ್ನು ಮಟ್ಟ ಹಾಕಬೇಕು ಎಂದು ಒತ್ತಾಯ ಮಾಡಿದ್ದೇನೆ. ಇಂತ ಜನರಿಗೆ ಸಂಯಮದ ಪಾಠ ಅಗತ್ಯವಿಲ್ಲ. ಅವರಿಗೆ ಅರ್ಥವಾಗುವ ಭಾಷೆಯಲ್ಲಿ ಉತ್ತರ ನೀಡಬೇಕು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT