ಸರ್ಕಾರ ಮಾಡುವ ಕೆಲಸಕ್ಕೆ ಜಮೀರ್ ಅಹ್ಮದ್ ಅನುಮತಿ ಯಾಕೆ ಕೇಳಬೇಕು. ಅವರು ಯಾರು. ಅವರ ಹೇಳಿಕೆ ನೋಡಿದರೆ ಇಂತಹ ಗಲಭೆಗೆ ಅವರೇ ಪ್ರಚೋದನೆ ನೀಡುತ್ತಿದ್ದಾರೆಂದು ಭಾವಿಸಬೇಕೆ? ರಾಜ್ಯದಲ್ಲಿ ಇಂತಹ ಘಟನೆ ನಡೆದಿರಲಿಲ್ಲ. ಈ ರೀತಿಯ ಗೂಂಡಾ ಪ್ರವೃತ್ತಿ ಸಹಿಸುವ ಪ್ರಶ್ನೆ ಇಲ್ಲ. ಇದರಲ್ಲಿ ಯಾವ ಧರ್ಮ, ಜಾತಿಯ ಪ್ರಶ್ನೆಯಿಲ್ಲ. ಗೂಂಡಾಗಿರಿ ಮಾಡುವವರ ವಿರುದ್ದ ಮುಲಾಜಿಲ್ಲದೆ ಕ್ರಮ ಜರುಗಿಸಲಾಗುವುದು ಎಂದು ಹೇಳಿದ್ದಾರೆ.