<p><strong>ಉಡುಪಿ: </strong>ಕುಂದಾಪುರ ತಹಶೀಲ್ದಾರ್ ಕಚೇರಿ ಆವರಣದಲ್ಲಿ ಪಾಕಿಸ್ತಾನ ಜಿಂದಾಬಾದ್, ಜಿಹಾದ್ ಜಿಂದಾಬಾದ್ ಘೋಷಣೆ ಕೂಗಿದ ರಾಘವೇಂದ್ರ ಎಂಬಾತನ ವಿರುದ್ಧ ಪೊಲೀಸರು ಸೆಕ್ಷನ್ 124 ಎ ಅಡಿ ದೇಶದ್ರೋಹ ಪ್ರಕರಣ ದಾಖಲಿಸಿದ್ದಾರೆ.</p>.<p>ಆರೋಪಿ ರಾಘವೇಂದ್ರ ಕುಂದಾಪುರದ ಕೋಡಿ ಮೂಲದ ವ್ಯಕ್ತಿ. ಸೋಮವಾರ ತಹಶೀಲ್ದಾರ್ ಕಚೇರಿಗೆ ಬಂದಿದ್ದ ಆತ ಏಕಾಏಕಿ ಪಾಕಿಸ್ತಾನ ಜಿಂದಾಬಾದ್ ಘೋಷಣೆ ಕೂಗುತ್ತಾ ಅಡ್ಡಾಡುತ್ತಿದ್ದ. ಸುದ್ದಿ ತಿಳಿದ ಪೊಲೀಸರು ಸ್ಥಳಕ್ಕೆ ಬಂದು ರಾಘವೇಂದ್ರನ್ನು ಎಳೆದೊಯ್ದರು.</p>.<p>ವಿಚಾರಣೆ ವೇಳೆ ಮೇಲ್ನೋಟಕ್ಕೆ ಆರೋಪಿ ಮಾನಸಿಕ ಅಸ್ವಸ್ಥ ಎಂಬ ಅಂಶ ತಿಳಿದುಬಂದಿದ್ದು, ಪೊಲೀಸರು ಪೂರ್ವಾಪರ ಪರಿಶೀಲಿಸುತ್ತಿದ್ದಾರೆ. ಆರೋಪಿಯನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.</p>.<p>ಮತ್ತೊಂದೆಡೆ, ಪೋಷಕರು ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿ, ‘ರಾಘವೇಂದ್ರ ಮಾನಸಿಕ ಅಸ್ವಸ್ಥತೆಯಿಂದ ಬಳಲುತ್ತಿದ್ದ. ಸೋಮವಾರ ಚಿಕಿತ್ಸೆಗೆ ಕುಂದಾಪುರ ಸರ್ಕಾರಿ ಆಸ್ಪತ್ರೆಗೆ ಕರೆತರಲಾಗಿತ್ತು. ಮೂತ್ರ ಮಾಡುವುದಾಗಿ ಹೊರಗೆ ಹೋದವ ಮರಳಿ ಬರಲಿಲ್ಲ. ಬಳಿಕ ಮಾಧ್ಯಮಗಳಲ್ಲಿ ಮಗನ ಬಂಧನ ಸುದ್ದಿ ತಿಳಿಯಿತು' ಎಂದು ತಿಳಿಸಿದರು.</p>.<p><strong>ಟಿವಿ ನೋಡಿ ಹೀಗಾದ:</strong></p>.<p>ಈಚೆಗೆ ಟಿವಿಗಳಲ್ಲಿ ತೋರಿಸಲಾಗುತ್ತಿದ್ದ ಪಾಕಿಸ್ತಾನ ಪರ ಘೋಷಣೆ ಸುದ್ದಿಗಳನ್ನು ಹೆಚ್ಚಾಗಿ ನೋಡುತ್ತಿದ್ದ ರಾಘವೇಂದ್ರ ಪ್ರೇರೇಪಿತನಾಗಿ ಪಾಕ್ ಪರ ಘೋಷಣೆ ಕೂಗಿದ್ದಾನೆ ಎಂದು ಪೋಷಕರು ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಉಡುಪಿ: </strong>ಕುಂದಾಪುರ ತಹಶೀಲ್ದಾರ್ ಕಚೇರಿ ಆವರಣದಲ್ಲಿ ಪಾಕಿಸ್ತಾನ ಜಿಂದಾಬಾದ್, ಜಿಹಾದ್ ಜಿಂದಾಬಾದ್ ಘೋಷಣೆ ಕೂಗಿದ ರಾಘವೇಂದ್ರ ಎಂಬಾತನ ವಿರುದ್ಧ ಪೊಲೀಸರು ಸೆಕ್ಷನ್ 124 ಎ ಅಡಿ ದೇಶದ್ರೋಹ ಪ್ರಕರಣ ದಾಖಲಿಸಿದ್ದಾರೆ.</p>.<p>ಆರೋಪಿ ರಾಘವೇಂದ್ರ ಕುಂದಾಪುರದ ಕೋಡಿ ಮೂಲದ ವ್ಯಕ್ತಿ. ಸೋಮವಾರ ತಹಶೀಲ್ದಾರ್ ಕಚೇರಿಗೆ ಬಂದಿದ್ದ ಆತ ಏಕಾಏಕಿ ಪಾಕಿಸ್ತಾನ ಜಿಂದಾಬಾದ್ ಘೋಷಣೆ ಕೂಗುತ್ತಾ ಅಡ್ಡಾಡುತ್ತಿದ್ದ. ಸುದ್ದಿ ತಿಳಿದ ಪೊಲೀಸರು ಸ್ಥಳಕ್ಕೆ ಬಂದು ರಾಘವೇಂದ್ರನ್ನು ಎಳೆದೊಯ್ದರು.</p>.<p>ವಿಚಾರಣೆ ವೇಳೆ ಮೇಲ್ನೋಟಕ್ಕೆ ಆರೋಪಿ ಮಾನಸಿಕ ಅಸ್ವಸ್ಥ ಎಂಬ ಅಂಶ ತಿಳಿದುಬಂದಿದ್ದು, ಪೊಲೀಸರು ಪೂರ್ವಾಪರ ಪರಿಶೀಲಿಸುತ್ತಿದ್ದಾರೆ. ಆರೋಪಿಯನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.</p>.<p>ಮತ್ತೊಂದೆಡೆ, ಪೋಷಕರು ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿ, ‘ರಾಘವೇಂದ್ರ ಮಾನಸಿಕ ಅಸ್ವಸ್ಥತೆಯಿಂದ ಬಳಲುತ್ತಿದ್ದ. ಸೋಮವಾರ ಚಿಕಿತ್ಸೆಗೆ ಕುಂದಾಪುರ ಸರ್ಕಾರಿ ಆಸ್ಪತ್ರೆಗೆ ಕರೆತರಲಾಗಿತ್ತು. ಮೂತ್ರ ಮಾಡುವುದಾಗಿ ಹೊರಗೆ ಹೋದವ ಮರಳಿ ಬರಲಿಲ್ಲ. ಬಳಿಕ ಮಾಧ್ಯಮಗಳಲ್ಲಿ ಮಗನ ಬಂಧನ ಸುದ್ದಿ ತಿಳಿಯಿತು' ಎಂದು ತಿಳಿಸಿದರು.</p>.<p><strong>ಟಿವಿ ನೋಡಿ ಹೀಗಾದ:</strong></p>.<p>ಈಚೆಗೆ ಟಿವಿಗಳಲ್ಲಿ ತೋರಿಸಲಾಗುತ್ತಿದ್ದ ಪಾಕಿಸ್ತಾನ ಪರ ಘೋಷಣೆ ಸುದ್ದಿಗಳನ್ನು ಹೆಚ್ಚಾಗಿ ನೋಡುತ್ತಿದ್ದ ರಾಘವೇಂದ್ರ ಪ್ರೇರೇಪಿತನಾಗಿ ಪಾಕ್ ಪರ ಘೋಷಣೆ ಕೂಗಿದ್ದಾನೆ ಎಂದು ಪೋಷಕರು ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>