ವಿಜಯಪುರ: ‘ಯಾವ ಮುಖ ಹೊತ್ತು ವಿಜಯಪುರಕ್ಕೆ ಭೇಟಿ ನೀಡುತ್ತಿದ್ದೀರಿ’ ಎಂದು ಪ್ರಧಾನಿ ನರೇಂದ್ರ ಮೋದಿ ಅವರನ್ನು ಗುಜರಾತ್ ಶಾಸಕ ಜಿಗ್ನೇಶ್ ಮೇವಾನಿ ಇಲ್ಲಿ ಪ್ರಶ್ನಿಸಿದರು.
ಕಳೆದ ಡಿಸೆಂಬರ್ ಅಂತ್ಯದಲ್ಲಿ ಅತ್ಯಾಚಾರಕ್ಕೀಡಾಗಿ ಹತ್ಯೆಯಾದ ನಗರದ ದಲಿತ ವಿದ್ಯಾರ್ಥಿನಿ ನಿವಾಸಕ್ಕೆ ಭೇಟಿ ನೀಡಿ, ಪೋಷಕರಿಗೆ ಸಾಂತ್ವನ ಹೇಳಿದ ಅವರು, ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದರು.
‘ನಾಲ್ಕು ತಿಂಗಳು ಗತಿಸಿದರೂ ಸಂತ್ರಸ್ತೆಯ ಕುಟುಂಬಕ್ಕೆ ನ್ಯಾಯ ದೊರೆತಿಲ್ಲ. ಆರೋಪಿಗಳ ಜತೆ ಬಿಜೆಪಿ ಮುಖಂಡರು, ಆರ್ಎಸ್ಎಸ್ ಪ್ರಮುಖರ ನಂಟಿರುವ ಛಾಯಾಚಿತ್ರಗಳ ಸಾಕ್ಷ್ಯ ದೊರೆತರೂ ಪೊಲೀಸರು ಯಾವುದೇ ಕ್ರಮ ತೆಗೆದುಕೊಂಡಿಲ್ಲ’ ಎಂದರು.