ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ರೈತಪರ ಕಾಳಜಿ ನಿಜವಾದದ್ದೇ ಅಥವಾ ಸುಳ್ಳೇ: ಪ್ರಧಾನಿ ಮೋದಿಗೆ ಸಿದ್ದರಾಮಯ್ಯ ಪ್ರಶ್ನೆ

Last Updated 5 ಮೇ 2018, 10:29 IST
ಅಕ್ಷರ ಗಾತ್ರ

ಬೆಂಗಳೂರು: ‘ರೈತಪರವಾದ ನಿಮ್ಮ ಕಾಳಜಿ ನಿಜವಾದದ್ದೇ ಅಥವಾ ಚುನಾವಣೆಗಾಗಿ ಹೇಳಿದ ಸುಳ್ಳೇ’ ಎಂದು ಪ್ರಧಾನಿ ನರೇಂದ್ರ ಮೋದಿ ಅವರನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರಶ್ನಿಸಿದ್ದಾರೆ.

ಗದಗದಲ್ಲಿ ನಡೆದ ಬಿಜೆಪಿ ಚುನಾವಣಾ ಪ್ರಚಾರ ರ್‍ಯಾಲಿಯಲ್ಲಿ ಮೋದಿ ಅವರು ಮಹದಾಯಿ ವಿಷಯ ಪ್ರಸ್ತಾಪಿಸಿರುವುದಕ್ಕೆ ಸಂಬಂಧಿಸಿ ಸಿದ್ದರಾಮಯ್ಯ ಟ್ವೀಟ್ ಮಾಡಿದ್ದಾರೆ.

‘ಪ್ರಿಯ ಪ್ರಧಾನಿ ಮೋದಿ ಅವರೇ, ಕೊನೆಗೂ ಮಹದಾಯಿ ವಿಚಾರದಲ್ಲಿ ಮೌನ ಮುರಿದಿರುವುದಕ್ಕೆ ಧನ್ಯವಾದಗಳು. ಗೋವಾ, ಮಹಾರಾಷ್ಟ್ರ ಮತ್ತು ಕರ್ನಾಟಕದ ಮುಖ್ಯಮಂತ್ರಿಗಳನ್ನು ಮಾತುಕತೆಗೆ ಕರೆಯುವಂತೆ ಕಳುಹಿಸಿದ್ದ  ಮನವಿ ಪತ್ರಕ್ಕೆ ನೀವು ಪ್ರತಿಕ್ರಿಯೆ ನೀಡಿದ್ದರೆ ಕೃತಜ್ಞರಾಗಿರುತ್ತಿದ್ದೆವು. #NijaHeliModi’ ಎಂದು ಸಿದ್ದರಾಮಯ್ಯ ಟ್ವೀಟ್ ಮಾಡಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT