ತುಮಕೂರು: ‘ತುಮಕೂರು ಲೋಕಸಭಾ ಕ್ಷೇತ್ರಕ್ಕೆ ನಾನು ಸ್ಪರ್ಧಿಸಲು ಒತ್ತಾಯ ಇತ್ತು. ಉಪಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ ಅವರು ಮನೆಗೆ ಬಂದು ತುಮಕೂರು ನಿಮ್ಮ ಪಕ್ಷಕ್ಕೆ ಬಿಟ್ಟುಕೊಟ್ಟಿರುವ ಕ್ಷೇತ್ರ. ನೀವು ಬಂದು ಸ್ಪರ್ಧೆ ಮಾಡಿದರೆ ನಾವು ಬೆಂಬಲಿಸುತ್ತೇವೆ ಎಂದರು. ಹೀಗಾಗಿ, ಸೋಮವಾರ ಮಧ್ಯಾಹ್ನ 2.15ಕ್ಕೆ ನಾಮಪತ್ರ ಸಲ್ಲಿಸುತ್ತಿದ್ದೇನೆ’ ಎಂದು ಜೆಡಿಎಸ್ ವರಿಷ್ಠ ಹಾಗೂ ತುಮಕೂರು ಲೋಕಸಭಾ ಕ್ಷೇತ್ರ ಮೈತ್ರಿ ಅಭ್ಯರ್ಥಿ ಎಚ್.ಡಿ.ದೇವೇಗೌಡ ಹೇಳಿದರು.