ಆದಾಗ್ಯೂ, ‘ಪಂಚಾಯತ್ ರಾಜ್ ಇಲಾಖೆ 2018ರ ಫೆಬ್ರುವರಿ 7ರಂದು ಹೊರಡಿಸಿರುವ ಸುತ್ತೋಲೆ ಪ್ರಕಾರ ಇನ್ನು ಮುಂದೆ ಗ್ರಾಮ ಪಂಚಾಯ್ತಿ ಅಧ್ಯಕ್ಷ ಉಪಾಧ್ಯಕ್ಷರ ವಿರುದ್ಧ ಅವಿಶ್ವಾಸ ನಿರ್ಣಯ ಮಂಡಿಸಬೇಕಾದರೆ ಅದನ್ನು ಉಪವಿಭಾಗಾಧಿಕಾರಿ ಗಮನಕ್ಕೆ ತರಬೇಕು. ನಿರ್ದಿಷ್ಟ ಆರೋಪಗಳಿದ್ದರೆ ಮಾತ್ರ ಅವುಗಳನ್ನು ಪರಿಗಣಿಸಿ ಮುಂದಿನ ಕ್ರಮ ಕೈಗೊಳ್ಳಬೇಕು’ ಎಂದೂ ವಿವರಿಸಿದೆ.