ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಪಲಿಮಾರು ಮಠದ ಉತ್ತರಾಧಿಕಾರಿಗೆ ಪಟ್ಟಾಭಿಷೇಕ

ನೂತನ ಯತಿಗಳಿಗೆ ವಿದ್ಯಾ ರಾಜೇಶ್ವರ ತೀರ್ಥರು ಎಂಬ ಹೆಸರು ನಾಮಕರಣ
Last Updated 12 ಮೇ 2019, 11:19 IST
ಅಕ್ಷರ ಗಾತ್ರ

ಉಡುಪಿ: ಅಷ್ಠಮಠಗಳಲ್ಲಿ ಒಂದಾದ ಪಲಿಮಾರು ಮಠದ 31ನೇ ಯತಿಗಳ ಪಟ್ಟಾಭಿಷೇಕ ಮಹೋತ್ಸವ ಭಾನುವಾರ ಶ್ರೀಕೃಷ್ಣ ಮಠದಲ್ಲಿ ನೆರವೇರಿತು. ಪರ್ಯಾಯ ಪಲಿಮಾರು ವಿದ್ಯಾಧೀಶ ಶ್ರೀಗಳು ಮಠದ ಮುಂದಿನ ಉತ್ತರಾಧಿಕಾರಿಯನ್ನಾಗಿ ವಿದ್ಯಾ ರಾಜೇಶ್ವರ ತೀರ್ಥರನ್ನು ನೇಮಿಸಿ ಪಟ್ಟಾಭಿಷೇಕ ಮಾಡಿದರು.

ಈ ಸಂದರ್ಭ ಅಷ್ಠಮಠಗಳ ಯತಿಗಳು ಉಪಸ್ಥಿತರಿದ್ದರು. ಮಧ್ಯಾಹ್ನ 12.20ಕ್ಕೆ ಸರ್ವಜ್ಞ ಪೀಠದಲ್ಲಿ ಕುಳಿತ ಪರ್ಯಾಯ ಶ್ರೀಗಳು ಉತ್ತರಾಧಿಕಾರಿಯ ಹೆಸರನ್ನು ನಾಮಕರಣ ಮಾಡಿ ಘೋಷಿಸುತ್ತಿದ್ದಂತೆ ಭಕ್ತರ ಜಯಘೋಷ ಮುಗಿಲು ಮುಟ್ಟಿತು.

ಬಳಿಕ ಪಲಿಮಾರು ಮಠದ ಹಿರಿಯ ಯತಿಗಳು, ಕಿರಿಯ ಯತಿಗಳನ್ನು ಶ್ರೀಕೃಷ್ಣನ ಗರ್ಭಗುಡಿಗೆ ಕರೆದೊಯ್ದು ಮಂಗಳಾರತಿ ಮಾಡಿಸಿ ಪ್ರಥಮ ಪೂಜೆ ನೇರವೇರಿಸಿದರು. ಈ ಮೂಲಕ ಅಧಿಕೃತವಾಗಿ ಕೃಷ್ಣ ಪೂಜೆಯ ಅಧಿಕಾರವನ್ನು ನೀಡಲಾಯಿತು.

ಪಟ್ಟಾಭಿಷೇಕದ ಪೂರ್ವಭಾವಿಯಾಗಿ ತತ್ವ ಹೋಮ, ಅಷ್ಟಮಹಾಮಂತ್ರ ಹೋಮ ಹಾಗೂ ಮಂಗಲಾಷ್ಟಕದ ಸಾಮೂಹಿಕ ಪಠಣ ನಡೆಯಿತು. ಪಲಿಮಾರು ಮಠದ ಉಭಯ ಯತಿಗಳು, ಅಷ್ಠಮಠದ ಯತಿಗಳಿಗೆ ದಂಡ ಪ್ರಣಾಮ ಮಾಡಿದರು. ತತ್ವಕಲಶಾಭಿಷೇಕ ನೇರವೇರಿದ ಬಳಿಕ ನಾಮಕರಣ ನಡೆಯಿತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT