‘ಪ್ರತಿ ವರ್ಷ ಎರಡೆರಡು ಬಾರಿ ಕ್ಯಾಮೆರಾ ಇಡಲಾಗುತ್ತದೆ. ಕ್ಯಾಮೆರಾ ಮೂಲಕ ಪ್ರತಿಯೊಂದು ಹುಲಿ ವಿವರ ತಿಳಿಯಲಾಗುತ್ತದೆ. ಆ ಪ್ರದೇಶದಲ್ಲಿ ಓಡಾಡುವ ಹುಲಿ ಯಾವುದು? ಅದರ ಗಾತ್ರ ಎಷ್ಟು? ಎಂಬ ವಿವರ ತಿಳಿದ ಬಳಿಕ ಯಾವ ಹುಲಿ ದಾಳಿ ಮಾಡಿರಬಹುದು ಎಂಬುದು ಗೊತ್ತಾಗಲಿದೆ. ಆ ಹುಲಿಯನ್ನು ಸುರಕ್ಷಿತವಾಗಿ ಸೆರೆ ಹಿಡಿದು ಮೈಸೂರು ಅಥವಾ ಬನ್ನೇರುಘಟ್ಟ ರಕ್ಷಣಾ ಶಿಬಿರದಲ್ಲಿ ಇಡಲಾಗುವುದು’ ಎಂದೂ ಅವರು ಹೇಳಿದರು.