ಶನಿವಾರ ಮಾಧ್ಯಮ ಪ್ರತಿನಿಧಿಗಳ ಜತೆ ಮಾತನಾಡಿದ ಅವರು, ‘ಸಮಿತಿಯ ಸಂಧಾನ ಸಂಘರ್ಷವಿಲ್ಲದೆ ಯಶಸ್ವಿಯಾಗಲಿ. ಆದರೆ, ದೇವರು ಇದ್ದಾನೋ ಇಲ್ಲವೋ ಎಂಬ ವಿಚಾರದಲ್ಲಿ ಸಂಧಾನದ ಅವಶ್ಯಕತೆ ಇತ್ತೇ? ಅಯೋಧ್ಯೆಯಲ್ಲಿ ರಾಮಮಂದಿರ ಇದ್ದಿದ್ದು ದೇವರಿದ್ದಷ್ಟೇ ನಿಶ್ಚಿತ ಎಂದಾದ ಮೇಲೆ ಸಂಧಾನ ಏಕೆ’ ಎಂದು ಶ್ರೀಗಳು ಪ್ರಶ್ನಿಸಿದರು.