ಮರಳುಗಾರಿಕೆ ಆರಂಭವಾಗದ ಪರಿಣಾಮ ಉದ್ದಿಮೆಗಳಿಗೆ, ಕೃಷಿ ಚಟುವಟಿಕೆಗಳಿಗೆ ತೊಂದರೆಯಾಗಿದೆ. ಜಿಲ್ಲೆಯಲ್ಲಿ ಅಭಿವೃದ್ಧಿ ಚಟುವಟಿಕೆಗಳು ಕುಂಠಿತಗೊಂಡಿವೆ. ಮರಳುಗಾರಿಕೆಯನ್ನು ಸಂಪೂರ್ಣವಾಗಿ ನಿಷೇಧಿಸಿದರೆ ಪ್ರಾಕೃತಿಕ ಅಸಮತೋಲನ ಉಂಟಾಗಿ ಕೇರಳಕ್ಕೆ ಎದುರಾದ ಗಂಡಾಂತರ ನಾಡಿಗೂ ಬರಬಹುದು. ಅನಿರ್ಬಂಧಿತ ಮರಳುಗಾರಿಕೆಯಿಂದ ಪರಿಸರ ನಾಶವಾಗುತ್ತದೆ. ಹಾಗಾಗಿ, ಎರಡೂ ವಿಚಾರವನ್ನು ಗಮನದಲ್ಲಿಟ್ಟುಕೊಂಡು ಮರಳುಗಾರಿಕೆಗೆ ಅನುಮತಿ ನೀಡಬೇಕು. ಇಲ್ಲವಾದರೆ, ಹೋರಾಟಕ್ಕೆ ಮುಂದಾಗಬೇಕಾಗುತ್ತದೆ ಎಂದು ಪೇಜಾವರ ಶ್ರೀಗಳು ತಿಳಿಸಿದರು.