<p><strong>ಉಡುಪಿ:</strong> ಪೇಜಾವರ ಮಠದ ವಿಶ್ವೇಶ ತೀರ್ಥ ಸ್ವಾಮೀಜಿ ಅವರುಶ್ವಾಸಕೋಶ ಸೋಂಕಿನಿಂದ ಬಳಲುತ್ತಿದ್ದು ಚಿಕಿತ್ಸೆಗೆ ನಿಧಾನವಾಗಿ ಸ್ಪಂದಿಸುತ್ತಿದ್ದಾರೆ. ಆರೋಗ್ಯ ಸ್ಥಿತಿ ಸುಧಾರಿಸಲು ತುಂಬಾ ಸಮಯ ಬೇಕಾಗಬಹುದು ಎಂದು ಬೆಂಗಳೂರು ಮಣಿಪಾಲ್ ಆಸ್ಪತ್ರೆಯ ಶ್ವಾಸಕೋಶ ವಿಭಾಗದ ತಜ್ಞ ವೈದ್ಯರಾದ ಸತ್ಯನಾರಾಯಣ ತಿಳಿಸಿದರು.</p>.<p>ಮಣಿಪಾಲದ ಕೆಎಂಸಿ ಆಸ್ಪತ್ರೆಯಲ್ಲಿ ಸುದ್ದಿಗೋಷ್ಠಿ ನಡೆಸಿದ ವೈದ್ಯರು, ಆಸ್ಪತ್ರೆಗೆ ದಾಖಲಾದ ದಿನಕ್ಕೆ ಹೋಲಿಸಿದರೆ ಆರೋಗ್ಯದಲ್ಲಿ ಸುಧಾರಣೆ ಕಂಡುಬಂದಿದೆ. ಆದರೂ ಆರೋಗ್ಯಸ್ಥಿತಿ ಗಂಭೀರವಾಗಿಯೇ ಇದೆ. ವಯಸ್ಸಿನ ಕಾರಣಕ್ಕೆ ಚಿಕಿತ್ಸೆಗೆ ನಿಧಾನಗತಿಯ ಸ್ಪಂದನೆ ಸಿಗುತ್ತಿದೆ ಎಂದರು.</p>.<p>ಸ್ಕ್ಯಾನಿಂಗ್, ಎಕ್ಸ್ರೇ, ಎಂಆರ್ಐ, ರಕ್ತ ಪರೀಕ್ಷೆ ಸೇರಿದಂತೆ ಅಗತ್ಯ ಪರೀಕ್ಷೆಗಳನ್ನು ನಡೆಸಲಾಗಿದೆ. ಚಿಕಿತ್ಸಾ ಕ್ರಮಗಳ ಕುರಿತು ದೆಹಲಿಯ ಏಮ್ಸ್ ವೈದ್ಯರ ಜತೆಗೆ ಗಂಟೆಗೊಮ್ಮೆ ಮಾಹಿತಿ ವಿನಿಮಯ ನಡೆಯುತ್ತಿದೆ. ಇಲ್ಲಿನ ಚಿಕಿತ್ಸೆಯ ಬಗ್ಗೆ ಏಮ್ಸ್ ವೈದ್ಯರಿಗೆ ಸಹಮತ ಇದೆ ಎಂದು ತಿಳಿಸಿದರು.</p>.<p>ಸ್ವಾಮೀಜಿ ಆಸ್ಪತ್ರೆಗೆ ದಾಖಲಾದಾಗ ನ್ಯುಮೋನಿಯಾ ಸೇರಿ ಹಲವು ತೆರೆನಾದ ಸಮಸ್ಯೆಗಳು ಕಂಡುಬಂದಿತ್ತು. ಈಗ ಶ್ವಾಸಕೋಶ ಸೋಂಕು ಹೊರತುಪಡಿಸಿ ಬೇರೆ ಸಮಸ್ಯೆಗಳು ಇಲ್ಲ. ಸಂಪೂರ್ಣ ಚೇತರಿಕೆವರೆಗೂ ಚಿಕಿತ್ಸೆ ಮುಂದುವರಿಯಲಿದೆ ಎಂದು ವೈದ್ಯರು ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಉಡುಪಿ:</strong> ಪೇಜಾವರ ಮಠದ ವಿಶ್ವೇಶ ತೀರ್ಥ ಸ್ವಾಮೀಜಿ ಅವರುಶ್ವಾಸಕೋಶ ಸೋಂಕಿನಿಂದ ಬಳಲುತ್ತಿದ್ದು ಚಿಕಿತ್ಸೆಗೆ ನಿಧಾನವಾಗಿ ಸ್ಪಂದಿಸುತ್ತಿದ್ದಾರೆ. ಆರೋಗ್ಯ ಸ್ಥಿತಿ ಸುಧಾರಿಸಲು ತುಂಬಾ ಸಮಯ ಬೇಕಾಗಬಹುದು ಎಂದು ಬೆಂಗಳೂರು ಮಣಿಪಾಲ್ ಆಸ್ಪತ್ರೆಯ ಶ್ವಾಸಕೋಶ ವಿಭಾಗದ ತಜ್ಞ ವೈದ್ಯರಾದ ಸತ್ಯನಾರಾಯಣ ತಿಳಿಸಿದರು.</p>.<p>ಮಣಿಪಾಲದ ಕೆಎಂಸಿ ಆಸ್ಪತ್ರೆಯಲ್ಲಿ ಸುದ್ದಿಗೋಷ್ಠಿ ನಡೆಸಿದ ವೈದ್ಯರು, ಆಸ್ಪತ್ರೆಗೆ ದಾಖಲಾದ ದಿನಕ್ಕೆ ಹೋಲಿಸಿದರೆ ಆರೋಗ್ಯದಲ್ಲಿ ಸುಧಾರಣೆ ಕಂಡುಬಂದಿದೆ. ಆದರೂ ಆರೋಗ್ಯಸ್ಥಿತಿ ಗಂಭೀರವಾಗಿಯೇ ಇದೆ. ವಯಸ್ಸಿನ ಕಾರಣಕ್ಕೆ ಚಿಕಿತ್ಸೆಗೆ ನಿಧಾನಗತಿಯ ಸ್ಪಂದನೆ ಸಿಗುತ್ತಿದೆ ಎಂದರು.</p>.<p>ಸ್ಕ್ಯಾನಿಂಗ್, ಎಕ್ಸ್ರೇ, ಎಂಆರ್ಐ, ರಕ್ತ ಪರೀಕ್ಷೆ ಸೇರಿದಂತೆ ಅಗತ್ಯ ಪರೀಕ್ಷೆಗಳನ್ನು ನಡೆಸಲಾಗಿದೆ. ಚಿಕಿತ್ಸಾ ಕ್ರಮಗಳ ಕುರಿತು ದೆಹಲಿಯ ಏಮ್ಸ್ ವೈದ್ಯರ ಜತೆಗೆ ಗಂಟೆಗೊಮ್ಮೆ ಮಾಹಿತಿ ವಿನಿಮಯ ನಡೆಯುತ್ತಿದೆ. ಇಲ್ಲಿನ ಚಿಕಿತ್ಸೆಯ ಬಗ್ಗೆ ಏಮ್ಸ್ ವೈದ್ಯರಿಗೆ ಸಹಮತ ಇದೆ ಎಂದು ತಿಳಿಸಿದರು.</p>.<p>ಸ್ವಾಮೀಜಿ ಆಸ್ಪತ್ರೆಗೆ ದಾಖಲಾದಾಗ ನ್ಯುಮೋನಿಯಾ ಸೇರಿ ಹಲವು ತೆರೆನಾದ ಸಮಸ್ಯೆಗಳು ಕಂಡುಬಂದಿತ್ತು. ಈಗ ಶ್ವಾಸಕೋಶ ಸೋಂಕು ಹೊರತುಪಡಿಸಿ ಬೇರೆ ಸಮಸ್ಯೆಗಳು ಇಲ್ಲ. ಸಂಪೂರ್ಣ ಚೇತರಿಕೆವರೆಗೂ ಚಿಕಿತ್ಸೆ ಮುಂದುವರಿಯಲಿದೆ ಎಂದು ವೈದ್ಯರು ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>