ಶ್ರೀಗಳ ನಿಧನ ಹಿನ್ನೆಲೆಯಲ್ಲಿ ಟ್ವೀಟ್ ಕೂಡ ಮಾಡಿರುವ ದೇವೇಗೌಡರು, ‘ಉಡುಪಿ ಪೇಜಾವರ ಮಠದ ಶ್ರೀ ವಿಶ್ವೇಶತೀರ್ಥ ಶ್ರೀಗಳು ಕೃಷ್ಣೈಕ್ಯರಾದರು ಎಂಬ ವಿಷಯ ತೀವ್ರ ಆಘಾತವನ್ನುಂಟುಮಾಡಿದೆ. ಸಮಾಜದ ಅಸಮಾನತೆಗಳ ವಿರುದ್ಧ ಧ್ವನಿಯಾಗಿದ್ದ ಶ್ರೀಗಳ ಚಿಂತನೆಗಳು ನಮ್ಮೆಲ್ಲರಿಗೂ ಮಾದರಿ. ಶ್ರೀಗಳ ಭಕ್ತವೃಂದಕ್ಕೆ ಈ ದುಃಖ ಭರಿಸುವ ಶಕ್ತಿಯನ್ನು ಭಗವಂತ ನೀಡಲಿ,’ ಎಂದು ಪ್ರಾರ್ಥಿಸುತ್ತೇನೆ.