ಬೆಂಗಳೂರು: ‘ಹೈಕೋರ್ಟ್ ಒಪ್ಪಿಗೆ ಇಲ್ಲದೆ ನ್ಯಾಯಾಧೀಶರ ಸಂಬಳ ಮತ್ತು ಪಿಂಚಣಿಗೆ ತಿದ್ದುಪಡಿ ಮಾಡಲು ರಾಜ್ಯ ಸರ್ಕಾರಕ್ಕೆ ಅಧಿಕಾರವಿಲ್ಲ’ ಎಂದು ಹೇಳಿರುವ ಹೈಕೋರ್ಟ್, 2006ರ ಏಪ್ರಿಲ್ 1ರ ನಂತರ ನೇಮಕಗೊಂಡ ಜಿಲ್ಲಾ ಮತ್ತು ಸಿವಿಲ್ ನ್ಯಾಯಾಧೀಶರನ್ನು ಹೊಸ ನಿವೃತ್ತಿ ವೇತನ ಯೋಜನೆಗೆ ಒಳಪಡಿಸಿ ರಾಜ್ಯ ಸರ್ಕಾರ ಜಾರಿಗೆ ತಂದಿದ್ದ ಕ್ರಮವನ್ನು ರದ್ದುಗೊಳಿಸಿದೆ.