ಮಂಗಳವಾರ, 19 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕ್ವಾರಂಟೈನ್ ಕೇಂದ್ರಗಳಿಂದ 15 ಸಾವಿರಕ್ಕೂ ಹೆಚ್ಚು ಜನರು ಮನೆಗೆ

Last Updated 29 ಮೇ 2020, 19:19 IST
ಅಕ್ಷರ ಗಾತ್ರ

ಕಲಬುರ್ಗಿ: ಕ್ವಾರಂಟೈನ್‌ ಕೇಂದ್ರಗಳಲ್ಲಿ ವಾರಕ್ಕಿಂತ ಹೆಚ್ಚು ದಿನಗಳಿಂದ ವಾಸವಿದ್ದವರನ್ನು ಬಿಡುಗಡೆ ಮಾಡುವಂತೆ ರಾಜ್ಯ ಸರ್ಕಾರ ಸೂಚಿಸಿರುವ ಹಿನ್ನೆಲೆಯಲ್ಲಿ ಕಲಬುರ್ಗಿ, ರಾಯಚೂರು, ಬೀದರ್, ಕೊಪ್ಪಳ ಮತ್ತು ಯಾದಗಿರಿ ಜಿಲ್ಲೆಗಳಿಂದ ಶುಕ್ರವಾರ ಜನರನ್ನು ಬಿಡುಗಡೆ ಮಾಡಲಾಯಿತು.

ರಾಯಚೂರು ಜಿಲ್ಲೆಯ 169 ಸಾಂಸ್ಥಿಕ ಕ್ವಾರಂಟೈನ್ ಕೇಂದ್ರಗಳಲ್ಲಿದ್ದ 10,537 ಪೈಕಿ 3,980 ಜನರು ಬಿಡುಗಡೆಯಾಗಿದ್ದಾರೆ. 44 ಸಾಂಸ್ಥಿಕ ಕ್ವಾರಂಟೈನ್ ಕೇಂದ್ರಗಳನ್ನು ಮುಚ್ಚಲಾಗಿದ್ದು, ಸದ್ಯಕ್ಕೆ 125 ಕ್ವಾರಂಟೈನ್ ಕೇಂದ್ರಗಳಲ್ಲಿ 6,557 ಜನರಿದ್ದಾರೆ. 3,315 ಪುರುಷರು ಮತ್ತು 3,242 ಮಹಿಳೆಯರು ಇದ್ದಾರೆ. ರಾಯಚೂರು ತಾಲ್ಲೂಕಿನಲ್ಲೇ ಅತಿ ಹೆಚ್ಚು 41 ಕ್ವಾರಂಟೈನ್ ಕೇಂದ್ರಗಳಿದ್ದು, 3006 ಜನರಿದ್ದಾರೆ.

ಬೀದರ್ ಜಿಲ್ಲೆಯಲ್ಲಿನ 635 ಸಾಂಸ್ಥಿಕ ಕ್ವಾರಂಟೈನ್ ಕೇಂದ್ರಗಳಲ್ಲಿದ್ದ 3068 ಪೈಕಿ 2648 ಜನರು ಬಿಡುಗಡೆಯಾಗಿದ್ದಾರೆ. ಶುಕ್ರವಾರ ಒಂದೇ ದಿನ 256 ಜನರು ಬಿಡುಗಡೆಯಾಗಿದ್ದು, ಮನೆಗೆ ಕಳುಹಿಸುವ ಮುನ್ನ ಅವರ ಗಂಟಲು ದ್ರವ ಮಾದರಿಯನ್ನು ಸಂಗ್ರಹಿಸಲಾಯಿತು.

ಯಾದಗಿರಿ ಜಿಲ್ಲೆಯ 224 ಕ್ವಾರಂಟೈನ್ ಕೇಂದ್ರಗಳಲ್ಲಿ 14,643 ಜನರಿದ್ದಾರೆ. ಈವರೆಗೆ ಒಂದು ಸಾವಿರಕ್ಕೂ ಹೆಚ್ಚು ಜನರನ್ನು ಬಿಡುಗಡೆ ಮಾಡಲಾಗಿದೆ.

ಕೊಪ್ಪಳ ಜಿಲ್ಲೆಯಲ್ಲಿ ಶುಕ್ರವಾರ 36 ಜನರನ್ನು ಬಿಡುಗಡೆ ಮಾಡಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT