ಚಿತ್ರದುರ್ಗ: ಹಿರಿಯೂರು ತಾಲ್ಲೂಕಿನ ಕೆ.ಆರ್. ಹಳ್ಳಿಯಲ್ಲಿರುವ ಐಒಸಿ ಕಂಪನಿಯ ಪೆಟ್ರೋಲ್ ಬಂಕ್ಗೆ ನುಗ್ಗಿದ ದುಷ್ಕರ್ಮಿಗಳು ₹ 2 ಲಕ್ಷ ದೋಚಿದ್ದಾರೆ.
ಗುರುವಾರ ನಸುಕಿನಲ್ಲಿ ಬಂಕ್ಗೆ ಬಂದ ದರೋಡೆಕೋರರು ಚಾಕು ತೋರಿಸಿ ಸಿಬ್ಬಂದಿಯನ್ನು ಬೆದರಿಸಿದ್ದಾರೆ. ಅಲ್ಲಿದ್ದ ಸಿಸಿಟಿವಿ ಕ್ಯಾಮೆರಾ ಹಾಗೂ ಕಂಪ್ಯೂಟರ್ ಪುಡಿ ಮಾಡಿದ್ದಾರೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.
ಬಳಿಕ ಸಿಬ್ಬಂದಿ ಬಳಿ ಇದ್ದ ಹಣ ಕಿತ್ತುಕೊಂಡು ಅವರನ್ನು ಕೊಠಡಿಯಲ್ಲಿ ಕೂಡಿ ಹಾಕಿದ್ದಾರೆ. ಕಾರಿಗೆ ಪೆಟ್ರೋಲ್ ತುಂಬಿಸಿಕೊಂಡು ಪರಾರಿ ಆಗಿದ್ದಾರೆ ಎಂದು ಪೊಲೀಸರು ವಿವರಿಸಿದ್ದಾರೆ.
ಸ್ಥಳಕ್ಕೆ ಚಿತ್ರದುರ್ಗ ಎಸ್ಪಿ ಕೆ.ಅರುಣ್ ಮತ್ತು ಸಿಪಿಐ ಗುರುರಾಜ್ ಭೇಟಿ ನೀಡಿದ್ದಾರೆ. ಶ್ವಾನದಳ, ಬೆರಳಚ್ಚು ತಜ್ಞರು ಪರಿಶೀಲನೆ ನಡೆಸಿದ್ದಾರೆ. ಹಿರಿಯೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.