‘ಯಡಿಯೂರಪ್ಪ ನಮಗೆ ಶತ್ರುವಲ್ಲ. ರಾಜಕೀಯದಲ್ಲಿ ಯಾವಾಗ ಏನು ಬೇಕಾದರೂ ಆಗಬಹುದು. ಯಾರೂ ಶಾಶ್ವತ ಶತ್ರುಗಳಲ್ಲ, ಮಿತ್ರರೂ ಅಲ್ಲ. ಯಡಿಯೂರಪ್ಪ, ಸಿದ್ದರಾಮಯ್ಯ ನಮಗೇನು ಆಜನ್ಮ ಶತ್ರುಗಳಲ್ಲ. ಆಯಾ ಸಂದರ್ಭಕ್ಕೆ ಅನುಗುಣವಾಗಿ ರಾಜಕೀಯ ಮಾತನಾಡಿರುತ್ತೇವೆ. ಕಾಲ ಕಾಲಕ್ಕೆ ಏನು ಆಗಬೇಕು ಅದು ಆಗುತ್ತದೆ’ ಎಂದು ಮಾರ್ಮಿಕವಾಗಿ ನುಡಿದರು.