ಶನಿವಾರ, 11 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮೈತ್ರಿ ಸರ್ಕಾರ ಬೀಳಿಸಲು ಟೈಮ್‌ ಬಾಂಬ್ ಫಿಕ್ಸ್ ಮಾಡಿದ್ದ ಸಿದ್ದರಾಮಯ್ಯ

ಜಗದೀಶ್ ಶೆಟ್ಟರ್ ಆರೋಪ
Last Updated 23 ಆಗಸ್ಟ್ 2019, 7:14 IST
ಅಕ್ಷರ ಗಾತ್ರ

ಹುಬ್ಬಳ್ಳಿ:ಫೋನ್ ಟ್ಯಾಪಿಂಗ್ ಪ್ರಕರಣವನ್ನುಸಿಬಿಐ ತನಿಖೆಗೆ ಕೊಟ್ಟಿದ್ದು ರಾಜಕೀಯ ದ್ವೇಷಕ್ಕಾಗಿ ಅಲ್ಲ. ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕಸಿದ್ದರಾಮಯ್ಯನವರೇ ತನಿಖೆ ಮಾಡಿಸಲು ಹೇಳಿದ್ದರುಎಂದು ಸಚಿವ ಜಗದೀಶ ಶೆಟ್ಟರ್ ಹೇಳಿದರು.

ಸಿಬಿಐ ತನಿಖೆ ಕೊಟ್ಟಿದ್ದಕ್ಕೆ ಸಿದ್ದರಾಮಯ್ಯಗೆ ಒಳಗೊಳಗೆ ಸಂತೋಷವಿದೆ. ಮೈತ್ರಿ ಸರ್ಕಾರ ಬೀಳಿಸಲು ಸಿದ್ದರಾಮಯ್ಯನವರೇ ಟೈಮ್‌ ಬಾಂಬ್ ಫಿಕ್ಸ್ ಮಾಡಿದ್ದರು ಎಂದು ಆರೋಪಿಸಿದ್ದಾರೆ.

ಫೋನ್ ಟ್ಯಾಪಿಂಗ್ ಮೂಲಕ ಜೆಡಿಎಸ್‌ ವರಿಷ್ಠ ಎಚ್‌.ಡಿ ದೇವೇಗೌಡರು ಸಿದ್ದರಾಮಯ್ಯನವರ ಚಲನವಲನ ಗಮನಿಸಿದ್ದಾರೆ. ಪೋನ್ ಕದ್ದಾಲಿಕೆ ಮಾಡಿದಾಗ ಸಿದ್ದರಾಮಯ್ಯ ಪ್ಲ್ಯಾನ್ ಗೊತ್ತಾಗಿದೆ‌. ಹೀಗಾಗಿಯೇ ದೇವೇಗೌಡರು ಸಿದ್ದರಾಮಯ್ಯ ವಿರುದ್ಧ ಕಿಡಿಕಾರುತ್ತಿದ್ದಾರೆ‌ ಎಂದರು.

ಅದಕ್ಕೆ‌ ಮೈತ್ರಿ ಸರ್ಕಾರ ಬೀಳಲು ಸಿದ್ದರಾಮಯ್ಯ ಕಾರಣ ಎಂದು ದೇವೇಗೌಡರು ಹೇಳುತ್ತಿದ್ದಾರೆ ಎಂದು ಹೇಳಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT