ಬೆಂಗಳೂರು: ‘ಮಾಧ್ಯಮ ಪ್ರತಿನಿಧಿಗಳು, ಏಜೆಂಟರು ಹಾಗೂ ಪತ್ರಿಕಾ ವಿತರಕರಲ್ಲಿ ಯಾರಾದರೂ ಕೋವಿಡ್- 19ಕ್ಕೆ ತುತ್ತಾಗಿ ಸಾವನ್ನಪ್ಪಿದರೆ ಅಂಥವರಿಗೆ ಸರ್ಕಾರದಿಂದ ₹ 50 ಲಕ್ಷ ಹಾಗೂ ಆಯಾ ಮಾಧ್ಯಮ ಸಂಸ್ಥೆಗಳಿಂದ ತಲಾ ₹ 50 ಲಕ್ಷ ಪರಿಹಾರ ಘೋಷಿಸಲು ನಿರ್ದೇಶಿಸಬೇಕು’ ಎಂದು ಕೋರಿ ಸಾರ್ವಜನಿಕ ಹಿತಾಸಕ್ತಿ ಅರ್ಜಿ (ಪಿಐಎಲ್) ಸಲ್ಲಿಸಲಾಗಿದೆ.
ಕೋರಮಂಗಲದ ಜಾಕೊಬ್ ಜಾರ್ಜ್ ಸಲ್ಲಿಸಿರುವ ಈ ಅರ್ಜಿ ಇನ್ನಷ್ಟೇ ವಿಚಾರಣೆಗೆ ಬರಬೇಕಿದೆ.
‘ಎಲೆಕ್ಟ್ರಾನಿಕ್, ಮುದ್ರಣ ಮಾಧ್ಯಮ ಪ್ರತಿನಿಧಿಗಳು, ಏಜೆಂಟರು ಮತ್ತು ಪತ್ರಿಕಾ ವಿತರಕರಿಗೆ ಕಡ್ಡಾಯ ಆರೋಗ್ಯ ತಪಾಸಣೆ ನಡೆಸಬೇಕು. ಸೋಂಕು ತಗುಲದಂತೆ ಅವರಿಗೆ ಸೂಕ್ತ ಸಾಧನಗಳನ್ನು ನೀಡಲು ನಿರ್ದೇಶಿಸಬೇಕು’ಎಂದು ಅರ್ಜಿದಾರರು ಮನವಿ ಮಾಡಿದ್ದಾರೆ.