ಈ ಕುರಿತಂತೆ ವಕೀಲರಾದ ಎಂ. ಲೋಕೇಶ್, ಯು.ಟಿ. ಪ್ರಶಾಂತ್ ಹಾಗೂ ಎಂ.ಕೆ. ಪೃಥ್ವೀಶ್ ಸಲ್ಲಿಸಿರುವ ಈ ಅರ್ಜಿಯನ್ನು ಇದೇ 27ಕ್ಕೆ ವಿಚಾರಣೆಗೆ ನಿಗದಿಪಡಿಸಲಾಗಿದೆ. ಪ್ರಕರಣದಲ್ಲಿ ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಇಲಾಖೆ ಹಾಗೂ ಕರ್ನಾಟಕ ಪರೀಕ್ಷಾ ಮಂಡಳಿಯ ಕಾರ್ಯದರ್ಶಿಗಳನ್ನು ಪ್ರತಿವಾದಿಗಳನ್ನಾಗಿ ಮಾಡಲಾಗಿದೆ.