<p>ಬೆಂಗಳೂರು: ವಿದ್ಯುತ್ ಚಾಲಿತ ಸ್ಕೂಟರ್ಗಳನ್ನು ನೋಂದಾಯಿಸದೆ ಉಪಯೋಗಿಸುತ್ತಿರುವುದನ್ನು ಪ್ರಶ್ನಿಸಿದ್ದ ಅರ್ಜಿಗೆ ಸಂಬಂಧಿಸಿದಂತೆ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳಿಗೆ ನೋಟಿಸ್ ಜಾರಿಗೊಳಿಸಲು ಹೈಕೋರ್ಟ್ ಆದೇಶಿಸಿದೆ.</p>.<p>ಈ ಕುರಿತಂತೆ ನಗರದ ವಕೀಲ ಕೆ.ಆರ್.ಪ್ರಸಾದ್ ರಾವ್ ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು (ಪಿಐಎಲ್) ಮುಖ್ಯ ನ್ಯಾಯಮೂರ್ತಿ ನೇತೃತ್ವದ ವಿಭಾಗೀಯ ನ್ಯಾಯಪೀಠ ವಿಚಾರಣೆ ನಡೆಸಿತು.</p>.<p>ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವಾಲಯದ ಕಾರ್ಯದರ್ಶಿ, ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಹಾಗೂ ಆಟೊಮೋಟಿವ್ ರೀಸರ್ಚ್ ಅಸೋಸಿಯೇಷನ್ ಆಫ್ ಇಂಡಿಯಾ ಸೇರಿದಂತೆ ಒಂಬತ್ತು ಜನ ಪ್ರತಿವಾದಿಗಳಿಗೆ ನೋಟಿಸ್ ಜಾರಿಗೊಳಿಸಲು ಆದೇಶಿಸಿದ ನ್ಯಾಯಪೀಠ, ಆಕ್ಷೇಪಣೆ ಸಲ್ಲಿಸುವಂತೆ ಸೂಚಿಸಿ ವಿಚಾರಣೆ ಮುಂದೂಡಿದೆ.</p>.<p>'ವಿದ್ಯುತ್ ಅಥವಾ ಬ್ಯಾಟರಿ ಚಾಲಿತ ದ್ವಿಚಕ್ರ ವಾಹನಗಳು ಪ್ರತಿ ಗಂಟೆಗೆ 25 ಕಿ.ಮೀ.ಗಿಂತ ಹೆಚ್ಚು ದೂರ ಕ್ರಮಿಸುವುದಿಲ್ಲ<br />ಎಂದು ಆಟೊಮೋಟಿವ್ ರೀಸರ್ಚ್ ಅಸೋಸಿಯೇಷನ್ ಆಫ್ ಇಂಡಿಯಾ ಪ್ರಮಾಣಪತ್ರ ನೀಡುತ್ತಿದೆ. ವಾಸ್ತವದಲ್ಲಿ ಈ ದ್ವಿಚಕ್ರ ವಾಹನಗಳು ಗಂಟೆಗೆ 45ಕ್ಕೂ ಕಿ.ಮೀ. ವೇಗದಲ್ಲಿ ಸಂಚರಿಸುವ ಸಾಮರ್ಥ್ಯ ಹೊಂದಿರುತ್ತವೆ. ಹಾಗಾಗಿ ನೋಂದಣಿ ಮಾಡದೇ ಇರುವುದು ಕಾನೂನು ಬಾಹಿರ' ಎಂಬುದು ಅರ್ಜಿದಾರರ ಅಕ್ಷೇಪ.</p>.<p>'ವಿದ್ಯುತ್ ಅಥವಾ ಬ್ಯಾಟರಿ ಚಾಲಿತ ದ್ವಿಚಕ್ರ ವಾಹನ ಬಳಕೆದಾರರು ಮೋಟಾರು ವಾಹನ ಕಾಯ್ದೆ-1989ರ ನಿಯಮ 2 (ಯು)ರ<br />ಅಡಿಯಲ್ಲಿ ಬರುವ ಮಾನದಂಡಗಳನ್ನು ಪಾಲಿಸಬೇಕು. ಈ ವಾಹನಗಳ ಬಳಕೆದಾರರು ನೋಂದಣಿ ಶುಲ್ಕ ಪಾವತಿಯಿಂದ ತಪ್ಪಿಸಿಕೊಳ್ಳಬಾರದು. ಇದರಿಂದ ಬೊಕ್ಕಸಕ್ಕೆ ನಷ್ಟ ಉಂಟಾಗುವುದನ್ನು ತಪ್ಪಿಸಬೇಕು. ಆದ್ದರಿಂದ, ಈ ವಾಹನಗಳ ಬಳಕೆದಾರರು ಕಡ್ಡಾಯ ನೋಂದಣಿ ಮಾಡಿಸಿಕೊಳ್ಳಲು ನಿರ್ದೇಶಿಸಬೇಕು' ಎಂದು ಅರ್ಜಿದಾರರು ಕೋರಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಬೆಂಗಳೂರು: ವಿದ್ಯುತ್ ಚಾಲಿತ ಸ್ಕೂಟರ್ಗಳನ್ನು ನೋಂದಾಯಿಸದೆ ಉಪಯೋಗಿಸುತ್ತಿರುವುದನ್ನು ಪ್ರಶ್ನಿಸಿದ್ದ ಅರ್ಜಿಗೆ ಸಂಬಂಧಿಸಿದಂತೆ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳಿಗೆ ನೋಟಿಸ್ ಜಾರಿಗೊಳಿಸಲು ಹೈಕೋರ್ಟ್ ಆದೇಶಿಸಿದೆ.</p>.<p>ಈ ಕುರಿತಂತೆ ನಗರದ ವಕೀಲ ಕೆ.ಆರ್.ಪ್ರಸಾದ್ ರಾವ್ ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು (ಪಿಐಎಲ್) ಮುಖ್ಯ ನ್ಯಾಯಮೂರ್ತಿ ನೇತೃತ್ವದ ವಿಭಾಗೀಯ ನ್ಯಾಯಪೀಠ ವಿಚಾರಣೆ ನಡೆಸಿತು.</p>.<p>ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವಾಲಯದ ಕಾರ್ಯದರ್ಶಿ, ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಹಾಗೂ ಆಟೊಮೋಟಿವ್ ರೀಸರ್ಚ್ ಅಸೋಸಿಯೇಷನ್ ಆಫ್ ಇಂಡಿಯಾ ಸೇರಿದಂತೆ ಒಂಬತ್ತು ಜನ ಪ್ರತಿವಾದಿಗಳಿಗೆ ನೋಟಿಸ್ ಜಾರಿಗೊಳಿಸಲು ಆದೇಶಿಸಿದ ನ್ಯಾಯಪೀಠ, ಆಕ್ಷೇಪಣೆ ಸಲ್ಲಿಸುವಂತೆ ಸೂಚಿಸಿ ವಿಚಾರಣೆ ಮುಂದೂಡಿದೆ.</p>.<p>'ವಿದ್ಯುತ್ ಅಥವಾ ಬ್ಯಾಟರಿ ಚಾಲಿತ ದ್ವಿಚಕ್ರ ವಾಹನಗಳು ಪ್ರತಿ ಗಂಟೆಗೆ 25 ಕಿ.ಮೀ.ಗಿಂತ ಹೆಚ್ಚು ದೂರ ಕ್ರಮಿಸುವುದಿಲ್ಲ<br />ಎಂದು ಆಟೊಮೋಟಿವ್ ರೀಸರ್ಚ್ ಅಸೋಸಿಯೇಷನ್ ಆಫ್ ಇಂಡಿಯಾ ಪ್ರಮಾಣಪತ್ರ ನೀಡುತ್ತಿದೆ. ವಾಸ್ತವದಲ್ಲಿ ಈ ದ್ವಿಚಕ್ರ ವಾಹನಗಳು ಗಂಟೆಗೆ 45ಕ್ಕೂ ಕಿ.ಮೀ. ವೇಗದಲ್ಲಿ ಸಂಚರಿಸುವ ಸಾಮರ್ಥ್ಯ ಹೊಂದಿರುತ್ತವೆ. ಹಾಗಾಗಿ ನೋಂದಣಿ ಮಾಡದೇ ಇರುವುದು ಕಾನೂನು ಬಾಹಿರ' ಎಂಬುದು ಅರ್ಜಿದಾರರ ಅಕ್ಷೇಪ.</p>.<p>'ವಿದ್ಯುತ್ ಅಥವಾ ಬ್ಯಾಟರಿ ಚಾಲಿತ ದ್ವಿಚಕ್ರ ವಾಹನ ಬಳಕೆದಾರರು ಮೋಟಾರು ವಾಹನ ಕಾಯ್ದೆ-1989ರ ನಿಯಮ 2 (ಯು)ರ<br />ಅಡಿಯಲ್ಲಿ ಬರುವ ಮಾನದಂಡಗಳನ್ನು ಪಾಲಿಸಬೇಕು. ಈ ವಾಹನಗಳ ಬಳಕೆದಾರರು ನೋಂದಣಿ ಶುಲ್ಕ ಪಾವತಿಯಿಂದ ತಪ್ಪಿಸಿಕೊಳ್ಳಬಾರದು. ಇದರಿಂದ ಬೊಕ್ಕಸಕ್ಕೆ ನಷ್ಟ ಉಂಟಾಗುವುದನ್ನು ತಪ್ಪಿಸಬೇಕು. ಆದ್ದರಿಂದ, ಈ ವಾಹನಗಳ ಬಳಕೆದಾರರು ಕಡ್ಡಾಯ ನೋಂದಣಿ ಮಾಡಿಸಿಕೊಳ್ಳಲು ನಿರ್ದೇಶಿಸಬೇಕು' ಎಂದು ಅರ್ಜಿದಾರರು ಕೋರಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>