<p><strong>ಚಿತ್ರದುರ್ಗ/ಕೂಡ್ಲಿಗಿ: </strong>ಧರ್ಮಸ್ಥಳ, ತಿರುಪತಿ, ಶ್ರೀಶೈಲದಂಥ ತೀರ್ಥ ಕ್ಷೇತ್ರಗಳಲ್ಲಿ ದೀಪ ಆರಿದೆ ಎಂಬ ವದಂತಿ ಚಿತ್ರದುರ್ಗ, ಬಳ್ಳಾರಿ ಜಿಲ್ಲೆಗಳಲ್ಲಿ ಆವರಿಸಿದ್ದು ಮಹಿಳೆಯರು ತಮ್ಮ ಮನೆಗಳ ಎದುರು ರಾತ್ರಿ ದೀಪಗಳನ್ನು ಬೆಳಗಿದ್ದಾರೆ.</p>.<p><strong>ಶ್ರೀಶೈಲದಲ್ಲಿ ದೀಪ ನಂದಿದೆ ಎಂಬ ವದಂತಿ</strong></p>.<p>ಕೂಡ್ಲಿಗಿ: ಶ್ರೀಶೈಲದ ಶ್ರೀ ಮಲ್ಲಿಕಾರ್ಜುನ ದೇವಸ್ಥಾನದಲ್ಲಿ ದೀಪ ನಂದಿದೆ. ಅದ್ದರಿಂದ ತಮ್ಮ ತಮ್ಮ ಮನೆಗಳ ಬಾಗಿಲ ಮುಂದೆ ನಾಲ್ಕು ದೀಪಗಳನ್ನು ಹಚ್ಚಿ ಇಡಬೇಕು ಎಂಬ ವದಂತಿ ಹಗರಿಬೊಮ್ಮನಹಳ್ಳಿ, ಕೊಟ್ಟೂರು, ಕೂಡ್ಲಿಗಿ ತಾಲ್ಲೂಕುಗಳಲ್ಲಿ ಹರಡಿದೆ.<br />ಇದರಿಂದ ಮಹಿಳೆಯರು ಮನೆಯ ಮುಂದೆ ಕಸ ಗೂಡಿಸಿ, ಸೆಗಣಿ ಸಾರಿಸಿ, ರಂಗೋಲೊ ಹಾಕಿ ವೀಳ್ಯದೆಲೆ ಅಥವಾ ಎಕ್ಕೆ ಎಲೆ ಇಟ್ಟು ನಾಲ್ಕು ದೀಪಗಳನ್ನು ಹಚ್ಚುತಿರುವುದು ಕಂಡು ಬಂದಿದೆ.</p>.<p><strong>ಸ್ಪಷ್ಟನೆ: </strong>ಈ ಬಗ್ಗೆ ಶ್ರೀಶೈಲ ಮಠಕ್ಕೆ ಪೋನ್ ಮಾಡಿ ವಿಚಾರಿಸಿದಾಗ "ಅಂತಃ ಯಾವುದೇ ಅವಘಡ ನಡೆದಿಲ್ಲ. ಎಂದಿನಂತೆ ಶ್ರೀಮಠದಲ್ಲಿ ಪೂಜಾ ಕಂಕಾರ್ಯಗಳು ನಡೆದಿವೆ ಎಂದು ಶ್ರೀಮಠದ ವಿಚಾರಣ ವಿಭಾಗದ ಸಿಬ್ಬಂದಿ ಸ್ಪಷ್ಟ ಪಡಿಸಿದ್ದಾರೆ.</p>.<p><strong>ಧರ್ಮಸ್ಥಳ, ತಿರುಪತಿ ದೇಗುಲ ದೀಪ ಆರಿದ ವದಂತಿ</strong></p>.<p>ಚಿತ್ರದುರ್ಗ: ಧರ್ಮಸ್ಥಳ ಮತ್ತು ತಿರುಪತಿ ದೇಗುಲದಲ್ಲಿ ದೀಪ ಆರಿ ಹೋಗಿದೆ ಎಂಬ ವದಂತಿಯ ಹಿನ್ನೆಲೆಯಲ್ಲಿ ಮಧ್ಯರಾತ್ರಿ ಮನೆ ಅಂಗಳದಲ್ಲಿ ದೀಪ ಹಚ್ಚಿರುವುದು ಚಳ್ಳಕೆರೆ ತಾಲ್ಲೂಕಿನ ನಾಯಕನಹಟ್ಟಿ ಮತ್ತು ಮೊಳಕಾಲ್ಮುರು ತಾಲ್ಲೂಕಿನಲ್ಲಿ ನಡೆದಿದೆ.</p>.<p>ದೇಗುಲದ ದೀಪ ಆರಿ ಹೋಗಿರುವುದು ಅಪಶಕುನದ ಸಂಕೇತ ಎಂಬ ವದಂತಿ ಗ್ರಾಮೀಣ ಪ್ರದೇಶದಲ್ಲಿ ಹಬ್ಬಿದೆ. ಕಿಡಿಗೇಡಿಗಳು ದೂರವಾಣಿ ಕರೆ ಮಾಡಿ ಜನರಿಗೆ ಸುಳ್ಳು ಮಾಹಿತಿ ನೀಡಿದ್ದಾರೆ. ಮಧ್ಯರಾತ್ರಿ ಎದ್ದು ಮನೆಯಂಗಳ ಸಾರಿಸಿದ ಮಹಿಳೆಯರು ದೀಪ ಹಚ್ಚಿಟ್ಟರು. ದೀಪ ಆರದಂತೆ ನೋಡಿಕೊಂಡರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಚಿತ್ರದುರ್ಗ/ಕೂಡ್ಲಿಗಿ: </strong>ಧರ್ಮಸ್ಥಳ, ತಿರುಪತಿ, ಶ್ರೀಶೈಲದಂಥ ತೀರ್ಥ ಕ್ಷೇತ್ರಗಳಲ್ಲಿ ದೀಪ ಆರಿದೆ ಎಂಬ ವದಂತಿ ಚಿತ್ರದುರ್ಗ, ಬಳ್ಳಾರಿ ಜಿಲ್ಲೆಗಳಲ್ಲಿ ಆವರಿಸಿದ್ದು ಮಹಿಳೆಯರು ತಮ್ಮ ಮನೆಗಳ ಎದುರು ರಾತ್ರಿ ದೀಪಗಳನ್ನು ಬೆಳಗಿದ್ದಾರೆ.</p>.<p><strong>ಶ್ರೀಶೈಲದಲ್ಲಿ ದೀಪ ನಂದಿದೆ ಎಂಬ ವದಂತಿ</strong></p>.<p>ಕೂಡ್ಲಿಗಿ: ಶ್ರೀಶೈಲದ ಶ್ರೀ ಮಲ್ಲಿಕಾರ್ಜುನ ದೇವಸ್ಥಾನದಲ್ಲಿ ದೀಪ ನಂದಿದೆ. ಅದ್ದರಿಂದ ತಮ್ಮ ತಮ್ಮ ಮನೆಗಳ ಬಾಗಿಲ ಮುಂದೆ ನಾಲ್ಕು ದೀಪಗಳನ್ನು ಹಚ್ಚಿ ಇಡಬೇಕು ಎಂಬ ವದಂತಿ ಹಗರಿಬೊಮ್ಮನಹಳ್ಳಿ, ಕೊಟ್ಟೂರು, ಕೂಡ್ಲಿಗಿ ತಾಲ್ಲೂಕುಗಳಲ್ಲಿ ಹರಡಿದೆ.<br />ಇದರಿಂದ ಮಹಿಳೆಯರು ಮನೆಯ ಮುಂದೆ ಕಸ ಗೂಡಿಸಿ, ಸೆಗಣಿ ಸಾರಿಸಿ, ರಂಗೋಲೊ ಹಾಕಿ ವೀಳ್ಯದೆಲೆ ಅಥವಾ ಎಕ್ಕೆ ಎಲೆ ಇಟ್ಟು ನಾಲ್ಕು ದೀಪಗಳನ್ನು ಹಚ್ಚುತಿರುವುದು ಕಂಡು ಬಂದಿದೆ.</p>.<p><strong>ಸ್ಪಷ್ಟನೆ: </strong>ಈ ಬಗ್ಗೆ ಶ್ರೀಶೈಲ ಮಠಕ್ಕೆ ಪೋನ್ ಮಾಡಿ ವಿಚಾರಿಸಿದಾಗ "ಅಂತಃ ಯಾವುದೇ ಅವಘಡ ನಡೆದಿಲ್ಲ. ಎಂದಿನಂತೆ ಶ್ರೀಮಠದಲ್ಲಿ ಪೂಜಾ ಕಂಕಾರ್ಯಗಳು ನಡೆದಿವೆ ಎಂದು ಶ್ರೀಮಠದ ವಿಚಾರಣ ವಿಭಾಗದ ಸಿಬ್ಬಂದಿ ಸ್ಪಷ್ಟ ಪಡಿಸಿದ್ದಾರೆ.</p>.<p><strong>ಧರ್ಮಸ್ಥಳ, ತಿರುಪತಿ ದೇಗುಲ ದೀಪ ಆರಿದ ವದಂತಿ</strong></p>.<p>ಚಿತ್ರದುರ್ಗ: ಧರ್ಮಸ್ಥಳ ಮತ್ತು ತಿರುಪತಿ ದೇಗುಲದಲ್ಲಿ ದೀಪ ಆರಿ ಹೋಗಿದೆ ಎಂಬ ವದಂತಿಯ ಹಿನ್ನೆಲೆಯಲ್ಲಿ ಮಧ್ಯರಾತ್ರಿ ಮನೆ ಅಂಗಳದಲ್ಲಿ ದೀಪ ಹಚ್ಚಿರುವುದು ಚಳ್ಳಕೆರೆ ತಾಲ್ಲೂಕಿನ ನಾಯಕನಹಟ್ಟಿ ಮತ್ತು ಮೊಳಕಾಲ್ಮುರು ತಾಲ್ಲೂಕಿನಲ್ಲಿ ನಡೆದಿದೆ.</p>.<p>ದೇಗುಲದ ದೀಪ ಆರಿ ಹೋಗಿರುವುದು ಅಪಶಕುನದ ಸಂಕೇತ ಎಂಬ ವದಂತಿ ಗ್ರಾಮೀಣ ಪ್ರದೇಶದಲ್ಲಿ ಹಬ್ಬಿದೆ. ಕಿಡಿಗೇಡಿಗಳು ದೂರವಾಣಿ ಕರೆ ಮಾಡಿ ಜನರಿಗೆ ಸುಳ್ಳು ಮಾಹಿತಿ ನೀಡಿದ್ದಾರೆ. ಮಧ್ಯರಾತ್ರಿ ಎದ್ದು ಮನೆಯಂಗಳ ಸಾರಿಸಿದ ಮಹಿಳೆಯರು ದೀಪ ಹಚ್ಚಿಟ್ಟರು. ದೀಪ ಆರದಂತೆ ನೋಡಿಕೊಂಡರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>