ಈ ಕುರಿತು 'ಪ್ರಜಾವಾಣಿ'ಗೆ ಪ್ರತಿಕ್ರಿಯಿಸಿದ ಪಿಲಿಕುಳ ಪ್ರಾಣಿ ಸಂಗ್ರಹಾಲಯದ ಡಾ.ಜಯಪ್ರಕಾಶ್ ಭಂಡಾರಿ, 'ನಿಸರ್ಗಧಾಮದ ಕಾಂಪೌಂಡ್ ಮೇಲೆ ಒಂದು ಕಡೆ ಮರ ಬಿದ್ದಿದೆ. ಅಲ್ಲಿಂದ ನಾಯಿಗಳು ಒಳಕ್ಕೆ ಬಂದಿವೆ. ಐದು ನಾಯಿಗಳನ್ನು ಸೆರೆಹಿಡಿದು ಸ್ಥಳಾಂತರಿಸಲಾಗಿದೆ' ಎಂದರು. ಪಿಲಿಕುಳದಲ್ಲಿ ಇದೇ ಮೊದಲ ಬಾರಿಗೆ ಇಂತಹ ಘಟನೆ ನಡೆದಿದೆ. ಗಾಯಗೊಂಡಿರುವ ಕಾಡು ಕುರಿಗಳಿಗೆ ಚಿಕಿತ್ಸೆ ನೀಡಲಾಗುತ್ತಿದೆ ಎಂದು ಹೇಳಿದರು.