<p><strong>ಪಿರಿಯಾಪಟ್ಟಣ: </strong>ಮಲೇಷ್ಯಾದಲ್ಲಿ ಉದ್ಯೋಗದಲ್ಲಿದ್ದ ಪಟ್ಟಣದ ಯುವಕ ನದಿಯಲ್ಲಿ ಮುಳುಗಿ ಮೃತಪಟ್ಟಿದ್ದಾರೆ.</p>.<p>ಪಿರಿಯಾಪಟ್ಟಣದ ಶೋಭಾ ವೆಂಕಟೇಶ್ ದಂಪತಿ ಪುತ್ರ ಸುಮಂತ್ (22) ನೀರು ಪಾಲಾದ ಯುವಕ.</p>.<p>ಈತ ಮಲೇಷ್ಯಾ ಮೂಲದ ಖಾಸಗಿ ಕಂಪನಿಯ ಸರಕು ಸಾಗಣೆ ಹಡಗಿನಲ್ಲಿ 9 ತಿಂಗಳಿನಿಂದ ನೌಕರಿ ಮಾಡುತ್ತಿದ್ದ. ಬುಧವಾರ ಮಲೇಷ್ಯಾದಿಂದ ಕುಟುಂಬಕ್ಕೆ ಕರೆ ಬಂದಿದ್ದು, ನಿಮ್ಮ ಮಗ ನದಿಯೊಂದರಲ್ಲಿ ಮುಳುಗಿ ಮೃತಪಟ್ಟಿದ್ದು, ಈ ಬಗ್ಗೆ ಇಲ್ಲಿನ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದ್ದು, ಶವ ಪತ್ತೆಗಾಗಿ ಶ್ರಮಿಸುತ್ತಿದ್ದೇವೆ ಎಂದು ತಿಳಿಸಿದ್ದಾರೆ.</p>.<p>‘ಗುರುವಾರ ಯುವಕನ ಶವ ಪತ್ತೆಯಾಗಿದ್ದು, ಗುರುತು ಪತ್ತೆಗೆ ಈತನೊಂದಿಗೆ ಕೆಲಸ ನಿರ್ವಹಿಸುತ್ತಿದ್ದ ಇಬ್ಬರು ಸ್ನೇಹಿತರನ್ನು ಕರೆಸಿಕೊಂಡು ಮಲೇಷ್ಯಾ ಪೊಲೀಸರು ವಿಚಾರಣೆ ನಡೆಸಿದ್ದಾರೆ’ ಎಂದು ಪಿಎಸ್ಐ ಗಣೇಶ್ ತಿಳಿಸಿದರು.</p>.<p>ಸಂಸದ ಪ್ರತಾಪಸಿಂಹ ರಾಯಭಾರ ಕಚೇರಿ, ಇಮಿಗ್ರೇಷನ್ ವಿಭಾಗಕ್ಕೆ ಸುಮಂತ್ ಪೋಷಕರಿಗೆ ಸಹಾಯ ಮಾಡುವಂತೆ ಮನವಿ ಮಾಡಿದ್ದಾರೆ.</p>.<p>‘9 ತಿಂಗಳಿನಿಂದ ಸುಮಂತ್, ಸ್ಥಳೀಯ ಖಾತೆಗೆ ಸಂಬಳದ ಹಣವನ್ನು ಜಮಾ ಮಾಡುತ್ತಿದ್ದ. ಡಿ.25ರಂದು ಭಾರತಕ್ಕೆ ಮರಳಿ ಬರಲು ವಿಮಾನ ಟಿಕೆಟ್ ಬುಕ್ ಮಾಡಿದ್ದ. ಈಗ ನೋಡಿದರೆ ಸಾವಿನ ಸುದ್ದಿ ಬರಸಿಡಿಲಿನಂತೆ ಬಂದಿದೆ’ ಎಂದು ಪೋಷಕರು ರೋದಿಸಿದರು.</p>.<p>‘ನಾವು ಮಲೇಷ್ಯಾಕ್ಕೆ ತೆರಳುವಷ್ಟು ಆರ್ಥಿಕ ಚೈತನ್ಯ ಹೊಂದಿಲ್ಲ’ ಎಂದೂ ಅಸಹಾಕತೆ ವ್ಯಕ್ತಪಡಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಪಿರಿಯಾಪಟ್ಟಣ: </strong>ಮಲೇಷ್ಯಾದಲ್ಲಿ ಉದ್ಯೋಗದಲ್ಲಿದ್ದ ಪಟ್ಟಣದ ಯುವಕ ನದಿಯಲ್ಲಿ ಮುಳುಗಿ ಮೃತಪಟ್ಟಿದ್ದಾರೆ.</p>.<p>ಪಿರಿಯಾಪಟ್ಟಣದ ಶೋಭಾ ವೆಂಕಟೇಶ್ ದಂಪತಿ ಪುತ್ರ ಸುಮಂತ್ (22) ನೀರು ಪಾಲಾದ ಯುವಕ.</p>.<p>ಈತ ಮಲೇಷ್ಯಾ ಮೂಲದ ಖಾಸಗಿ ಕಂಪನಿಯ ಸರಕು ಸಾಗಣೆ ಹಡಗಿನಲ್ಲಿ 9 ತಿಂಗಳಿನಿಂದ ನೌಕರಿ ಮಾಡುತ್ತಿದ್ದ. ಬುಧವಾರ ಮಲೇಷ್ಯಾದಿಂದ ಕುಟುಂಬಕ್ಕೆ ಕರೆ ಬಂದಿದ್ದು, ನಿಮ್ಮ ಮಗ ನದಿಯೊಂದರಲ್ಲಿ ಮುಳುಗಿ ಮೃತಪಟ್ಟಿದ್ದು, ಈ ಬಗ್ಗೆ ಇಲ್ಲಿನ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದ್ದು, ಶವ ಪತ್ತೆಗಾಗಿ ಶ್ರಮಿಸುತ್ತಿದ್ದೇವೆ ಎಂದು ತಿಳಿಸಿದ್ದಾರೆ.</p>.<p>‘ಗುರುವಾರ ಯುವಕನ ಶವ ಪತ್ತೆಯಾಗಿದ್ದು, ಗುರುತು ಪತ್ತೆಗೆ ಈತನೊಂದಿಗೆ ಕೆಲಸ ನಿರ್ವಹಿಸುತ್ತಿದ್ದ ಇಬ್ಬರು ಸ್ನೇಹಿತರನ್ನು ಕರೆಸಿಕೊಂಡು ಮಲೇಷ್ಯಾ ಪೊಲೀಸರು ವಿಚಾರಣೆ ನಡೆಸಿದ್ದಾರೆ’ ಎಂದು ಪಿಎಸ್ಐ ಗಣೇಶ್ ತಿಳಿಸಿದರು.</p>.<p>ಸಂಸದ ಪ್ರತಾಪಸಿಂಹ ರಾಯಭಾರ ಕಚೇರಿ, ಇಮಿಗ್ರೇಷನ್ ವಿಭಾಗಕ್ಕೆ ಸುಮಂತ್ ಪೋಷಕರಿಗೆ ಸಹಾಯ ಮಾಡುವಂತೆ ಮನವಿ ಮಾಡಿದ್ದಾರೆ.</p>.<p>‘9 ತಿಂಗಳಿನಿಂದ ಸುಮಂತ್, ಸ್ಥಳೀಯ ಖಾತೆಗೆ ಸಂಬಳದ ಹಣವನ್ನು ಜಮಾ ಮಾಡುತ್ತಿದ್ದ. ಡಿ.25ರಂದು ಭಾರತಕ್ಕೆ ಮರಳಿ ಬರಲು ವಿಮಾನ ಟಿಕೆಟ್ ಬುಕ್ ಮಾಡಿದ್ದ. ಈಗ ನೋಡಿದರೆ ಸಾವಿನ ಸುದ್ದಿ ಬರಸಿಡಿಲಿನಂತೆ ಬಂದಿದೆ’ ಎಂದು ಪೋಷಕರು ರೋದಿಸಿದರು.</p>.<p>‘ನಾವು ಮಲೇಷ್ಯಾಕ್ಕೆ ತೆರಳುವಷ್ಟು ಆರ್ಥಿಕ ಚೈತನ್ಯ ಹೊಂದಿಲ್ಲ’ ಎಂದೂ ಅಸಹಾಕತೆ ವ್ಯಕ್ತಪಡಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>