ಪ್ಲಾಸ್ಟಿಕ್ ಕುರಿತು ಜಾಗೃತಿ ಮೂಡಿಸಲು ಇಂದಿರಾ ಗಾಜಿನ ಮನೆಯಲ್ಲಿ ಆಯೋಜಿಸಿರುವ ಕಾರ್ಯಕ್ರಮಕ್ಕೂ ಇದೇ ಸಂದರ್ಭದಲ್ಲಿ ಇಟ್ನಾಳ ಆಹ್ವಾನಿಸಿದರು. ಇದರಿಂದ ಸಿಟ್ಟಿಗೆದ್ದ ಅವರು ‘ಕಾರ್ಯಕ್ರಮ ಆಯೋಜನೆ ವಿಷಯವನ್ನೇ ಸರಿಯಾಗಿ ತಿಳಿಸುವುದಿಲ್ಲ. ಹಾಗಾಗಿ, ಬರುವುದಿಲ್ಲ’ ಎಂದು ಅತ್ತ ಹೋಗಲೇ ಇಲ್ಲ. ಘಟನೆಯಿಂದ ಜಿಲ್ಲಾಧಿಕಾರಿ ದೀಪಾ ಮುಜುಗರಕ್ಕೆ ಒಳಗಾದರು.