ಅಫಜಲಪುರ ತಾಲ್ಲೂಕಿನ ಕರಜಗಿ ಗ್ರಾಮದ ಅನಿಲ ಶಾಂತಪ್ಪ ಮಲಘಾಣ ಬಂಧಿತ ಯುವಕ. ಹಾಸನದ ಹೋಟೆಲೊಂದರಲ್ಲಿ ವೇಟರ್ ಆಗಿ ಕೆಲಸ ಮಾಡುತ್ತಿರುವ ಯುವಕ ಈ ವಿಡಿಯೊ ಮಾಡಿ ವಾಟ್ಸ್ ಆ್ಯಪ್ ಗುಂಪುಗಳಿಗೆ ಹರಿಬಿಟ್ಟಿದ್ದ. ಕಾಶ್ಮೀರಕ್ಕೆ ನೀಡಲಾಗಿದ್ದ 370 ವಿಧಿಯನ್ನು ರದ್ದುಗೊಳಿಸಿದ ಮೋದಿ ಅವರ ಕ್ರಮವನ್ನು ಟೀಕಿಸಿದ್ದಕ್ಕಾಗಿ ಮಾಯಾವತಿ, ಖರ್ಗೆ, ಮಮತಾ ಹಾಗೂ ಸಿದ್ದರಾಮಯ್ಯ ಅವರ ವಿರುದ್ಧ ವೈಯಕ್ತಿಕ ನಿಂದನೆಗಳನ್ನು ಮಾಡಿದ್ದಾನೆ.