ಬೆಂಗಳೂರು: ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ಯುಗಾದಿ ಸಲುವಾಗಿ ಕನ್ನಡದಲ್ಲಿ ಟ್ವೀಟ್ ಮಾಡಿ ಶುಭ ಕೋರಿದ್ದಾರೆ.
‘ಯುಗಾದಿ ಹೊಸ ವರ್ಷ ಬಂದಿದೆ!ಈ ವರ್ಷ ಆಕಾಂಕ್ಷೆಗಳನ್ನು ಈಡೇರಿಸಲಿ, ವಿಪತ್ತುಗಳಿಂದ ಹೊರಬರಲು ಹೊಸ ಚೈತನ್ಯ ತರಲಿ ಎಂದು ನಾನು ಪ್ರಾರ್ಥಿಸುತ್ತೇನೆ. ಪ್ರತಿಯೊಬ್ಬರಿಗೂ ಸಂತಸ ಮತ್ತು ಅದಕ್ಕಿಂತ ಮಿಗಿಲಾಗಿ ಉತ್ತಮ ಆರೋಗ್ಯದ ಆಶಿರ್ವಾದವಿರಲಿ’ ಎಂದು ಹಾರೈಸಿದ್ದಾರೆ.
ಈ ಟ್ವೀಟ್ ಸುಮಾರು 5 ಸಾವಿರಕ್ಕೂ ಹೆಚ್ಚು ಬಾರಿ ರೀಟ್ವೀಟ್ ಆಗಿದ್ದು, 25 ಸಾವಿರಕ್ಕೂ ಹೆಚ್ಚು ಜನರು ಮೆಚ್ಚಿಕೊಂಡಿದ್ದಾರೆ.
ಯುಗಾದಿ ಹೊಸ ವರ್ಷ ಬಂದಿದೆ!
ಈ ವರ್ಷ ಆಕಾಂಕ್ಷೆಗಳನ್ನು ಈಡೇರಿಸಲಿ, ವಿಪತ್ತುಗಳಿಂದ ಹೊರಬರಲು ಹೊಸ ಚೈತನ್ಯ ತರಲಿ ಎಂದು ನಾನು ಪ್ರಾರ್ಥಿಸುತ್ತೇನೆ. ಪ್ರತಿಯೊಬ್ಬರಿಗೂ ಸಂತಸ ಮತ್ತು ಅದಕ್ಕಿಂತ ಮಿಗಿಲಾಗಿ ಉತ್ತಮ ಆರೋಗ್ಯದ ಆಶಿರ್ವಾದವಿರಲಿ.