ಶಾಸಕ ಸ್ಥಾನ ಹಾಗೂ ಕಾಂಗ್ರೆಸ್ಗೆ ರಾಜೀನಾಮೆ ನೀಡಿರುವ ಡಾ.ಉಮೇಶ ಜಾಧವ ಅವರನ್ನು ಮೋದಿ ಸಮ್ಮುಖದಲ್ಲಿ ಬಿಜೆಪಿ ಸೇರ್ಪಡೆ ಮಾಡಿಕೊಳ್ಳುವ ಸಿದ್ಧತೆ ನಡೆದಿದೆ. ಆದರೆ, ಶಾಸಕಸ್ಥಾನಕ್ಕೆ ಜಾಧವ ನೀಡಿರುವ ರಾಜೀನಾಮೆ ಅಂಗೀಕಾರವಾಗದಿದ್ದರೆ ಮೋದಿ ಕಾರ್ಯಕ್ರಮದಲ್ಲಿ ಅವರುಬಿಜೆಪಿ ಸೇರ್ಪಡೆಯಾಗುವುದು ಅನುಮಾನ ಎನ್ನಲಾಗುತ್ತಿದೆ. ಮಂಗಳವಾರ ಕಲಬುರ್ಗಿಯಲ್ಲಿ ಮಾತನಾಡಿದ ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ.ಎಸ್.ಯಡಿಯೂರಪ್ಪ, ಶಾಸಕ ಆರ್.ಅಶೋಕ ಹಾಗೂಕ್ಷೇತ್ರಕ್ಕೆ ಬಂದಿರುವ ಉಮೇಶ ಜಾಧವ ಅವರು ಈ ವಿಷಯವಾಗಿ ಏನನ್ನೂ ಸ್ಪಷ್ಟವಾಗಿ ಹೇಳಲಿಲ್ಲ.