ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕಲಬುರ್ಗಿಗೆ ಇಂದು ಪ್ರಧಾನಿ

ಹೈದರಾಬಾದ್‌ ಕರ್ನಾಟಕದಲ್ಲಿ ಪ್ರಚಾರಕ್ಕೆ ಚಾಲನೆ
Last Updated 5 ಮಾರ್ಚ್ 2019, 19:23 IST
ಅಕ್ಷರ ಗಾತ್ರ

ಕಲಬುರ್ಗಿ: ಪ್ರಧಾನಿ ನರೇಂದ್ರ ಮೋದಿ ಮಾ.6ರಂದು ನಗರಕ್ಕೆ ಬರಲಿದ್ದು, ಲೋಕಸಭೆ ಚುನಾವಣೆ ಘೋಷಣೆ ಮುನ್ನವೇ ಹೈದರಾಬಾದ್‌ ಕರ್ನಾಟಕದಲ್ಲಿ ಬಿಜೆಪಿ ಚುನಾವಣಾ ಪ್ರಚಾರಕ್ಕೆ ಚಾಲನೆ ನೀಡಲಿದ್ದಾರೆ.

ಶಾಸಕ ಸ್ಥಾನ ಹಾಗೂ ಕಾಂಗ್ರೆಸ್‌ಗೆ ರಾಜೀನಾಮೆ ನೀಡಿರುವ ಡಾ.ಉಮೇಶ ಜಾಧವ ಅವರನ್ನು ಮೋದಿ ಸಮ್ಮುಖದಲ್ಲಿ ಬಿಜೆಪಿ ಸೇರ್ಪಡೆ ಮಾಡಿಕೊಳ್ಳುವ ಸಿದ್ಧತೆ ನಡೆದಿದೆ. ಆದರೆ, ಶಾಸಕಸ್ಥಾನಕ್ಕೆ ಜಾಧವ ನೀಡಿರುವ ರಾಜೀನಾಮೆ ಅಂಗೀಕಾರವಾಗದಿದ್ದರೆ ಮೋದಿ ಕಾರ್ಯಕ್ರಮದಲ್ಲಿ ಅವರುಬಿಜೆಪಿ ಸೇರ್ಪಡೆಯಾಗುವುದು ಅನುಮಾನ ಎನ್ನಲಾಗುತ್ತಿದೆ. ಮಂಗಳವಾರ ಕಲಬುರ್ಗಿಯಲ್ಲಿ ಮಾತನಾಡಿದ ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ.ಎಸ್‌.ಯಡಿಯೂರಪ್ಪ, ಶಾಸಕ ಆರ್‌.ಅಶೋಕ ಹಾಗೂಕ್ಷೇತ್ರಕ್ಕೆ ಬಂದಿರುವ ಉಮೇಶ ಜಾಧವ ಅವರು ಈ ವಿಷಯವಾಗಿ ಏನನ್ನೂ ಸ್ಪಷ್ಟವಾಗಿ ಹೇಳಲಿಲ್ಲ.

ಕೇಂದ್ರ ಸರ್ಕಾರದ ವಿವಿಧ ಅಭಿವೃದ್ಧಿ ಯೋಜನೆಗಳಿಗೆ ಮೋದಿ ಚಾಲನೆ ನೀಡುವರು ಹಾಗೂ ಆಯುಷ್ಮಾನ್‌ ಭಾರತ್‌ ಯೋಜನೆಯ ಫಲಾನುಭವಿಗಳೊಂದಿಗೆ ಸಂವಾದ ನಡೆಸುವರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT