ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ತುಮಕೂರಿನ ರೈತ ಸಮಾವೇಶಕ್ಕೆ ಪ್ರಧಾನಿ ಮೋದಿ

ಜ. 2ರಂದು ಕಿಸಾನ್‌ ಸಮ್ಮಾನ್‌ 4ನೇ ಕಂತಿನ ಹಣ ಬಿಡುಗಡೆ; ಸಿದ್ಧಗಂಗಾ ಮಠಕ್ಕೆ ಭೇಟಿ
Last Updated 27 ಡಿಸೆಂಬರ್ 2019, 20:30 IST
ಅಕ್ಷರ ಗಾತ್ರ

ತುಮಕೂರು: ಪ್ರಧಾನಿ ನರೇಂದ್ರ ಮೋದಿ ಜ.2 ರಂದು ತುಮಕೂರಿನಲ್ಲಿ ನಡೆಯುವ ಬೃಹತ್ ರೈತ ಸಮಾವೇಶಕ್ಕೆ ಆಗಮಿಸುತ್ತಿದ್ದು, ಅಂದು ಸಿದ್ಧಗಂಗಾ ಮಠಕ್ಕೆ ಭೇಟಿ ನೀಡಿ ಲಿಂಗೈಕ್ಯ ಡಾ.ಶಿವಕುಮಾರ ಸ್ವಾಮೀಜಿ ಗದ್ದುಗೆ ದರ್ಶನ ಪಡೆಯಲಿದ್ದಾರೆ.

ಸಮಾವೇಶ ನಡೆಯುವ ಸ್ಥಳ ಪರಿಶೀಲಿಸಿದ ಬಳಿಕ ಉಪಮುಖ್ಯಮಂತ್ರಿ ಲಕ್ಷ್ಮಣ ಸವದಿ ಹಾಗೂ ಸಚಿವ ಸೋಮಣ್ಣ ಅವರುಸುದ್ದಿಗಾರರೊಂದಿಗೆ ಮಾತನಾಡಿದರು. ಪ್ರಧಾನಿಯವರು ಅಂದು ಮಧ್ಯಾಹ್ನ 2.10ಕ್ಕೆ ತುಮಕೂರಿಗೆ ಬರಲಿದ್ದಾರೆ. ಮೊದಲು ಸಿದ್ಧಗಂಗಾ ಮಠಕ್ಕೆ ಭೇಟಿ ನೀಡುವರು. ಬಳಿಕ ನಗರದ ಜೂನಿಯರ್ ಕಾಲೇಜು ಮೈದಾನದಲ್ಲಿ ನಡೆಯುವ ಸಮಾವೇಶದಲ್ಲಿ ಕಿಸಾನ್ ಸಮ್ಮಾನ್ ಯೋಜನೆಯ 4ನೇ ಕಂತಿನ ಹಣ ಬಿಡುಗಡೆ ಮಾಡುವರು ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT