ಎಪಿಎಂಸಿ ಆವರಣದಲ್ಲಿ ಬೆಳಗ್ಗೆಯಿಂದಲೇ ಜನ ತರಕಾರಿ, ಹೂ ಹಣ್ಣು ಖರೀದಿಗೆ ಧಾವಿಸಿದರು. ಹೊತ್ತು ಕಳೆದಂತೆ ಜನಸಂದಣಿಯೂ ಹೆಚ್ಚಾಯಿತು. ಇಡೀ ಮಾರುಕಟ್ಟೆ ಪ್ರಾಂಗಣ ಜನರಿಂದ ತುಂಬಿತ್ತು. ಪರಿಸ್ಥಿತಿ ನಿಯಂತ್ರಣಕ್ಕಾಗಿ ಪೊಲೀಸರು ಮಧ್ಯ ಪ್ರವೇಶ ಮಾಡಿದ್ದು, ಲಾಠಿ ತೋರಿಸಿ ಜನರನ್ನು ಅಲ್ಲಿಂದ ಚದುರಿಸಿದರು. ನಂತರ ಮಾರುಕಟ್ಟೆ ಪ್ರವೇಶದ ಗೇಟುಗಳನ್ನು ಬಂದ್ ಮಾಡಲಾಯಿತು. ಒಳಗೆ ಇದ್ದವರಿಗೆ ಮಾತ್ರ ಖರೀದಿಗೆ ಅವಕಾಶ ನೀಡಲಾಯಿತು.