ನಗರದಲ್ಲಿ ಶನಿವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಆರೋಗ್ಯದ ದೃಷ್ಟಿಯಿಂದಾಗಿ ಜನರು ಮುಂಜಾಗ್ರತಾ ಕ್ರಮಗಳನ್ನ ಪಾಲಿಸಬೇಕು.ಪ್ರಧಾನಿಯವರ ಕರೆಯಂತೆ ಜನತಾ ಕರ್ಫ್ಯೂ ನಡೆಯುತ್ತಿದೆ. ಇದನ್ನು ಗಂಭೀರವಾಗಿ ಪರಿಗಣಿಸಬೇಕು. ಕುಟುಂಬ ಸದಸ್ಯರ ಜೊತೆ ಎಲ್ಲರೂ ಮನೆಯಲ್ಲಿರಬೇಕು. ಪ್ರವಾಸ, ವಾಯುವಿಹಾರ ಹಾಗೂ ನಾನಾ ಕಾರ್ಯಕ್ರಮ ಹೆಸರಿನಲ್ಲಿ ಹೊರಗಡೆ ಸುತ್ತಾಡಬಾರದು’ ಎಂದು ಹೇಳಿದರು.