ಕಲಬುರ್ಗಿ: ಡಕಾಯಿತಿ, ಅಪಹರಣ ಮತ್ತು ರಾಬರಿ ಪ್ರಕರಣಗಳಲ್ಲಿ ಭಾಗಿಯಾಗಿದ್ದ ಇಬ್ಬರು ಆರೋಪಿಗಳ ಮೇಲೆ ಪೊಲೀಸ್ ಅಧಿಕಾರಿಗಳು ಗುಂಡಿನ ದಾಳಿ ನಡೆಸಿದ್ದಾರೆ.
ಉಮೇಶ ಮಾಳಗಿ ಹಾಗೂ ಬಾಬು ಅಲಿಯಾಸ ಬಾಬ್ಯಾ ಗಾಯಗೊಂಡವರು. ಇವರನ್ನು ಜಿಲ್ಲಾ ಆಸ್ಪತ್ರೆಗೆ ದಾಖಲಿಸಲಾಗಿದೆ.
ಪಿಎಸ್ಐ ಅಕ್ಕಮಹಾದೇವಿ, ಕಾನ್ ಸ್ಟೆಬಲ್ಗಳಾದ ರಾಜಕುಮಾರ, ಪ್ರಕಾಶ ಮತ್ತು ನಿಂಗಪ್ಪ ಅವರ ಮೇಲೆ ಡಕಾಯಿತರು ಮಾರಕಾಸ್ತ್ರಗಳಿಂದ ಹಲ್ಲೆ ಮಾಡಿದ್ದು, ಇವರನ್ನು ಯುನೈಟೆಡ್ ಆಸ್ಪತ್ರೆಗೆ ದಾಖಲಿಸಲಾಗಿದೆ.
‘ಆರೋಪಿಗಳನ್ನು ಬಂಧಿಸಲು ಪೊಲೀಸರು ರಾತ್ರಿ 2 ಗಂಟೆಯಿಂದ ಕಾರ್ಯಾಚರಣೆ ನಡೆಸಿದ್ದರು. ಬೆಳಿಗ್ಗೆ 5 ಗಂಟೆ ಸುಮಾರಿಗೆ ಪಬ್ಲಿಕ್ ಗಾರ್ಡನ್ನಲ್ಲಿದ್ದ ಆರೋಪಿಗಳನ್ನು ಬಂಧಿಸಲು ಮುಂದಾದಾಗ ಪೊಲೀಸರ ಮೇಲೆ ಹಲ್ಲೆ ಮಾಡಿ ಪರಾರಿಗೆ ಯತ್ನಿಸಿದರು. ಈ ವೇಳೆ ಪೊಲೀಸರು ಹಾಗೂ ಪೊಲೀಸ್ ಅಧಿಕಾರಿಗಳು ಆತ್ಮರಕ್ಷಣೆಗಾಗಿ ಆರೋಪಿಗಳ ಕಾಲಿಗೆ ಗುಂಡು ಹಾರಿಸಿದ್ದಾರೆ’ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎನ್.ಶಶಿಕುಮಾರ್ ತಿಳಿಸಿದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.