<p><strong>ಬೆಂಗಳೂರು:</strong> ಅಪಘಾತ ಪ್ರಕರಣದಲ್ಲಿ ಜಪ್ತಿ ಮಾಡಿದ್ದ ದ್ವಿಚಕ್ರ ವಾಹನ ಬಿಡುಗಡೆ ಮಾಡಲು ₹ 5 ಸಾವಿರ ಲಂಚ ಪಡೆಯುತ್ತಿದ್ದ ಸಂದರ್ಭದಲ್ಲೇ ಚಿಕ್ಕಜಾಲ ಸಂಚಾರ ಠಾಣೆ ಹೆಡ್ ಕಾನ್ಸ್ಟೆಬಲ್ ಮುರಳಿ ಭ್ರಷ್ಟಾಚಾರ ನಿಗ್ರಹ ದಳದ (ಎಸಿಬಿ) ಬಲೆಗೆ ಬಿದ್ದಿದ್ದಾರೆ.</p>.<p>‘ವಾಹನ ಮಾಲೀಕರು ನೀಡಿದ್ದ ದೂರಿನಡಿ ಕಾರ್ಯಾಚರಣೆ ನಡೆಸಿ ಆರೋಪಿ ಮುರಳಿ ಅವರನ್ನು ಬಂಧಿಸಲಾಗಿದೆ. ಲಂಚದ ಹಣವನ್ನೂ ಜಪ್ತಿ ಮಾಡಲಾಗಿದೆ’ ಎಂದು ಎಸಿಬಿ ಅಧಿಕಾರಿಯೊಬ್ಬರು ತಿಳಿಸಿದರು.</p>.<p>‘ಠಾಣೆ ವ್ಯಾಪ್ತಿಯಲ್ಲಿ ಇದೇ 1ರಂದು ಅಪಘಾತ ಸಂಭವಿಸಿತ್ತು. ದ್ವಿಚಕ್ರ ವಾಹನ ಪಾದಚಾರಿಗೆ ಗುದ್ದಿತ್ತು. ಸ್ಥಳಕ್ಕೆ ಹೋಗಿದ್ದ ಪೊಲೀಸರು ದ್ವಿಚಕ್ರ ವಾಹನ ಜಪ್ತಿ ಮಾಡಿದ್ದರು. ಠಾಣೆ ಎದುರು ತಂದು ನಿಲ್ಲಿಸಿದ್ದರು. ಮಾಲೀಕರು ವಾಹನ ಬಿಡಿಸಿಕೊಳ್ಳಲು ಠಾಣೆಗೆ ಹೋಗಿ ವಿಚಾರಿಸಿದ್ದರು.’</p>.<p>‘ಮಾಲೀಕರನ್ನು ಮಾತನಾಡಿಸಿದ್ದ ಮುರಳಿ, ವಾಹನ ಬಿಡುಗಡೆ ಮಾಡಲು ಸಾರಿಗೆ ಇಲಾಖೆ ಅಧಿಕಾರಿಗಳ ವರದಿ ಬೇಕು. ಅದಕ್ಕೆ ₹ 5 ಸಾವಿರ ಖರ್ಚಾಗುತ್ತದೆ. ಅದರ ಮೇಲೆ ₹ 1 ಸಾವಿರ ಹೆಚ್ಚುವರಿಯಾಗಿ ನೀಡಬೇಕೆಂದು ಲಂಚಕ್ಕೆ ಬೇಡಿಕೆ ಇಟ್ಟಿದ್ದರು. ಬೇಸತ್ತ ವಾಹನ ಮಾಲೀಕ ಎಸಿಬಿಗೆ ದೂರು ನೀಡಿದ್ದರು. ಮಾಲೀಕರಿಂದ ಹಣ ಪಡೆಯುತ್ತಿದ್ದ ವೇಳೆಯಲ್ಲೇ ದಾಳಿ ಮಾಡಿ ಆರೋಪಿಯನ್ನು ಸೆರೆ ಹಿಡಿಯಲಾಯಿತು’ ಎಂದು ಅಧಿಕಾರಿ ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ಅಪಘಾತ ಪ್ರಕರಣದಲ್ಲಿ ಜಪ್ತಿ ಮಾಡಿದ್ದ ದ್ವಿಚಕ್ರ ವಾಹನ ಬಿಡುಗಡೆ ಮಾಡಲು ₹ 5 ಸಾವಿರ ಲಂಚ ಪಡೆಯುತ್ತಿದ್ದ ಸಂದರ್ಭದಲ್ಲೇ ಚಿಕ್ಕಜಾಲ ಸಂಚಾರ ಠಾಣೆ ಹೆಡ್ ಕಾನ್ಸ್ಟೆಬಲ್ ಮುರಳಿ ಭ್ರಷ್ಟಾಚಾರ ನಿಗ್ರಹ ದಳದ (ಎಸಿಬಿ) ಬಲೆಗೆ ಬಿದ್ದಿದ್ದಾರೆ.</p>.<p>‘ವಾಹನ ಮಾಲೀಕರು ನೀಡಿದ್ದ ದೂರಿನಡಿ ಕಾರ್ಯಾಚರಣೆ ನಡೆಸಿ ಆರೋಪಿ ಮುರಳಿ ಅವರನ್ನು ಬಂಧಿಸಲಾಗಿದೆ. ಲಂಚದ ಹಣವನ್ನೂ ಜಪ್ತಿ ಮಾಡಲಾಗಿದೆ’ ಎಂದು ಎಸಿಬಿ ಅಧಿಕಾರಿಯೊಬ್ಬರು ತಿಳಿಸಿದರು.</p>.<p>‘ಠಾಣೆ ವ್ಯಾಪ್ತಿಯಲ್ಲಿ ಇದೇ 1ರಂದು ಅಪಘಾತ ಸಂಭವಿಸಿತ್ತು. ದ್ವಿಚಕ್ರ ವಾಹನ ಪಾದಚಾರಿಗೆ ಗುದ್ದಿತ್ತು. ಸ್ಥಳಕ್ಕೆ ಹೋಗಿದ್ದ ಪೊಲೀಸರು ದ್ವಿಚಕ್ರ ವಾಹನ ಜಪ್ತಿ ಮಾಡಿದ್ದರು. ಠಾಣೆ ಎದುರು ತಂದು ನಿಲ್ಲಿಸಿದ್ದರು. ಮಾಲೀಕರು ವಾಹನ ಬಿಡಿಸಿಕೊಳ್ಳಲು ಠಾಣೆಗೆ ಹೋಗಿ ವಿಚಾರಿಸಿದ್ದರು.’</p>.<p>‘ಮಾಲೀಕರನ್ನು ಮಾತನಾಡಿಸಿದ್ದ ಮುರಳಿ, ವಾಹನ ಬಿಡುಗಡೆ ಮಾಡಲು ಸಾರಿಗೆ ಇಲಾಖೆ ಅಧಿಕಾರಿಗಳ ವರದಿ ಬೇಕು. ಅದಕ್ಕೆ ₹ 5 ಸಾವಿರ ಖರ್ಚಾಗುತ್ತದೆ. ಅದರ ಮೇಲೆ ₹ 1 ಸಾವಿರ ಹೆಚ್ಚುವರಿಯಾಗಿ ನೀಡಬೇಕೆಂದು ಲಂಚಕ್ಕೆ ಬೇಡಿಕೆ ಇಟ್ಟಿದ್ದರು. ಬೇಸತ್ತ ವಾಹನ ಮಾಲೀಕ ಎಸಿಬಿಗೆ ದೂರು ನೀಡಿದ್ದರು. ಮಾಲೀಕರಿಂದ ಹಣ ಪಡೆಯುತ್ತಿದ್ದ ವೇಳೆಯಲ್ಲೇ ದಾಳಿ ಮಾಡಿ ಆರೋಪಿಯನ್ನು ಸೆರೆ ಹಿಡಿಯಲಾಯಿತು’ ಎಂದು ಅಧಿಕಾರಿ ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>