‘ಆ್ಯಂಬಿಡೆಂಟ್’ ಕಂಪನಿ ವಂಚನೆ ಪ್ರಕರಣದಲ್ಲಿ 4ನೇ ಆರೋಪಿಯಾಗಿರುವ ರಮೇಶ್, ‘ಸಿಸಿಬಿ ಡಿಸಿಪಿ ಎಸ್.ಗಿರೀಶ್ ಹಾಗೂ ಎಸಿಪಿ ಎಚ್.ಎನ್.ವೆಂಕಟೇಶ್ ಪ್ರಸನ್ನ ನನಗೆ ಚಿತ್ರಹಿಂಸೆ ನೀಡಿದ್ದಾರೆ. ಅವರ ವಿರುದ್ಧ ಕ್ರಮ ಕೈಗೊಳ್ಳಬೇಕು’ ಎಂದು ರಾಜ್ಯ ಮಾನವ ಹಕ್ಕುಗಳ ಆಯೋಗಕ್ಕೆ (ಎಸ್ಎಚ್ಆರ್ಸಿ) ಬುಧವಾರ ದೂರು ಕೊಟ್ಟಿದ್ದಾರೆ. ರಮೇಶ್ ಪರವಾಗಿ ‘ರಾಜ್ಯ ಜ್ಯುವೆಲರ್ಸ್ ಓನರ್ಸ್ ಫೆಡರೇಷನ್’ ಕೂಡ ಆಯೋಗಕ್ಕೆ ಮನವಿ ಸಲ್ಲಿಸಿದೆ.