ಔರಾದಕರ ಶಿಫಾರಸು ಜಾರಿ ಮಾಡುವಾಗ ಆರನೇ ವೇತನ ಆಯೋಗದ ಶಿಫಾರಸುಗಳನ್ನು ಅಳವಡಿಸಿಕೊಂಡಿದ್ದರಿಂದ ಸಿಬ್ಬಂದಿಗೆ ತಾರತಮ್ಯ ಆಗಿದೆ ಎಂಬ ಕೂಗೆದ್ದಿತ್ತು. ಆದೇಶ ತಡೆಹಿಡಿದಿದ್ದ ಗೃಹ ಸಚಿವ ಬಸವರಾಜ ಬೊಮ್ಮಾಯಿ, ತಾರತಮ್ಯ ನಿವಾರಿಸಿ ಆದೇಶ ಹೊರಡಿಸಲು ಸೂಚಿಸಿದ್ದರು. ಈ ಸಂಬಂಧ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಸಮ್ಮುಖದಲ್ಲಿ ಸಭೆ ನಡೆದಿತ್ತು. ‘ಹೊಸದಾಗಿ ಕೆಲಸಕ್ಕೆ ಸೇರುವ ಪೊಲೀಸ್ ಕಾನ್ಸ್ಟೆಬಲ್ಗಳ ವೇತನ ₹ 30,427 ರಿಂದ ₹ 34,267ಕ್ಕೆ ಏರಿಕೆಯಾಗಲಿದೆ’ ಎಂದು ಯಡಿಯೂರಪ್ಪ ತಿಳಿಸಿದ್ದಾರೆ.