ಜಾಗರಣೆ ನಿಮಿತ್ತ ದೇವಸ್ಥಾನದಲ್ಲಿ ಯಕ್ಷಗಾನ ಆಯೋಜಿಸಲಾಗಿತ್ತು. ರಾತ್ರಿ 10.30ರ ಬಳಿಕ ಮೂರು ಬಾರಿ ಅಲ್ಲಿಗೆ ಭೇಟಿ ನೀಡಿದ ಕಾವೂರು ಪೊಲೀಸ್ ಠಾಣೆ ಇನ್ಸ್ಪೆಕ್ಟರ್ ಕೆ.ಆರ್.ನಾಯ್ಕ್, ಕಾರ್ಯಕ್ರಮ ಸ್ಥಗಿತಗೊಳಿಸುವಂತೆ ತಾಕೀತು ಮಾಡಿದ್ದಾರೆ. ಕಾರ್ಯಕ್ರಮ ಸ್ಥಗಿತಗೊಳಿಸುವಂತೆ ಐಜಿಪಿಯವರಿಂದ ಆದೇಶ ಬಂದಿದೆ ಎಂದು ಸಂಘಟಕರಿಗೆ ತಿಳಿಸಿದ್ದಾರೆ.