ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸಿದ್ದರಾಮಯ್ಯ ವಿರುದ್ಧ ಶಾಸಕಿ ಪೂರ್ಣಿಮಾ ಕಿಡಿ

ತಂದೆಗೆ ಟಿಕೆಟ್‌ ತಪ್ಪಿಸಿದ್ದು ಏಕೆ: ಪ್ರಶ್ನೆ
Last Updated 21 ನವೆಂಬರ್ 2019, 2:35 IST
ಅಕ್ಷರ ಗಾತ್ರ

ಕೆ.ಆರ್.ಪುರ: ‘ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರು ಅಂದು ನನ್ನ ತಂದೆ ಎ.ಕೃಷ್ಣಪ್ಪ ಅವರಿಗೆ ಮೋಸ ಮಾಡಿದ್ದರು. ಇಂದು ನನ್ನ ತಂದೆಯನ್ನು ಚುನಾವಣಾ ಪ್ರಚಾರಕ್ಕೆ ಬಳಸಿಕೊಳ್ಳುತ್ತಿದ್ದಾರೆ’ ಎಂದು ಹಿರಿಯೂರು ಶಾಸಕಿ ಪೂರ್ಣಿಮಾ ಶ್ರೀನಿವಾಸ್ ಕಿಡಿಕಾರಿದರು.

ಕೆ.ಆರ್.ಪುರ ಕ್ಷೇತ್ರದ ವ್ಯಾಪ್ತಿಯಲ್ಲಿ ಬಿಜೆಪಿ ಅಭ್ಯರ್ಥಿ ಬೈರತಿ ಬಸವರಾಜು ಪರ ಪ್ರಚಾರ ಸಭೆಯಲ್ಲಿ ಪಾಲ್ಗೊಂಡು ಮಾತನಾಡಿದರು.

‘ಮುಖ್ಯಮಂತ್ರಿ ಆಗಬೇಕು ಎಂಬ ಉದ್ದೇಶದಿಂದ ಸಿದ್ದರಾಮಯ್ಯ ನನ್ನ ತಂದೆಯನ್ನು ತುಳಿದರು. ಹಿಂದುಳಿದ ಸಮುದಾಯದ ನಾಯಕರಾದ ಕಾರಣಕ್ಕೆ ಟಿಕೆಟ್‌ ತಪ್ಪಿಸಿದರು. ನಿಜವಾದ ಕಾಳಜಿ ಇದ್ದಿದ್ದರೆ ಬೈರತಿ ಬಸವರಾಜು ಅವರಿಗೆ ಬುದ್ಧಿ ಹೇಳಬಹುದಿತ್ತು. ಬಸವರಾಜು ಅವತ್ತು ಸಿದ್ದರಾಮಯ್ಯ ಹಾಕಿದ ಗೆರೆ ದಾಟುತ್ತಿರಲ್ಲಿಲ್ಲ‌’ ಎಂದರು.

ಬೈರತಿ ಬಸವರಾಜು ಮಾತನಾಡಿ, ‘ಎ ಕೃಷ್ಣಪ್ಪ ಅವರಿಗೆ ಟಿಕೆಟ್‌ ತಪ್ಪಿಸಿದ್ದು ಯಾರು ಎಂಬುದನ್ನು ಸಿದ್ದರಾಮಯ್ಯನವರೇ ಹೇಳಬೇಕು. ಸಿದ್ದರಾಮಯ್ಯ ನಮ್ಮ ಕೈ ಹಿಡಿಯಲಿಲ್ಲ‌. ನನ್ನ ಸ್ವಾಭಿಮಾನಕ್ಕೆ ಧಕ್ಕೆಯಾಗಿದ್ದರಿಂದ ಪಕ್ಷ ತ್ಯಜಿಸಿದ್ದೇನೆ’ ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT