ಇತ್ತೀಚೆಗಷ್ಟೇ ಸಂಪುಟಕ್ಕೆ ಸೇರ್ಪಡೆಯಾದ ಸಚಿವರಿಗೆ ಸೋಮವಾರವಷ್ಟೇ ಖಾತೆ ಹಂಚಿಕೆ ಮಾಡಲಾಗಿತ್ತು. ಇವರಲ್ಲಿ ಬಿ.ಗೋಪಾಲಯ್ಯ, ಆನಂದ ಸಿಂಗ್ ಮತ್ತು ಬಿ.ಸಿ.ಪಾಟೀಲ ಅವರು ಮುಖ್ಯಮಂತ್ರಿ ಅವರನ್ನು ಅಂದು ರಾತ್ರಿಯೇ ಭೇಟಿ ಮಾಡಿ ತಮಗೆ ನೀಡಿದ ಖಾತೆಗಳ ಬಗ್ಗೆ ತೀವ್ರ ಅಸಮಾಧಾನ ವ್ಯಕ್ತಪಡಿಸಿ, ಬದಲಿಸಿಕೊಡುವಂತೆ ಪಟ್ಟು ಹಿಡಿದರು ಎಂದು ಹೇಳಲಾಗಿದೆ.