ಬೆಂಗಳೂರು: ‘ಕೆಲ ಶಂಕಿತರು, ದೇಶದೊಳಗೆ ದುಷ್ಕೃತ್ಯ ಎಸಗಲು ಸಂಚು ರೂಪಿಸಿದ್ದಾರೆ’ ಎಂಬುದಾಗಿ ಕೇಂದ್ರ ಗುಪ್ತಚರ ಇಲಾಖೆ ಎಚ್ಚರಿಕೆ ನೀಡಿದ್ದು, ರಾಜ್ಯದಾದ್ಯಂತ ಕಟ್ಟೆಚ್ಚರ ವಹಿಸುವಂತೆ ಪೊಲೀಸ್ ಇಲಾಖೆ ಸೂಚನೆ ನೀಡಿದೆ.
ಆ ಸಂಬಂಧ ರಾಜ್ಯದ ಹಿರಿಯ ಪೊಲೀಸ್ ಅಧಿಕಾರಿಗಳಿಗೆ ತುರ್ತು ಸಂದೇಶ ಕಳುಹಿಸಿರುವ ಡಿಜಿಪಿ ನೀಲಮಣಿ ರಾಜು, ತಮ್ಮ ಕಾರ್ಯವ್ಯಾಪ್ತಿಯಲ್ಲಿ ಭದ್ರತೆಯನ್ನು ಬಿಗಿಗೊಳಿಸುವಂತೆ ಸೂಚನೆ ನೀಡಿದ್ದಾರೆ.
‘ಪ್ರಮುಖವಾಗಿ ಬೆಂಗಳೂರಿನಲ್ಲಿ ಹೆಚ್ಚು ನಿಗಾ ವಹಿಸುವಂತೆ ಕಮಿಷನರ್ ಅವರಿಗೆ ಸೂಚಿಸ ಲಾಗಿದೆ. ಅನುಮಾನಾಸ್ಪದ ವ್ಯಕ್ತಿಗಳು ಹಾಗೂ ವಸ್ತುಗಳನ್ನು ತಪಾಸಣೆ ನಡೆಸುವಂತೆಯೂ ಹೇಳಲಾಗಿದೆ’ ಎಂದು ಮೂಲಗಳು ತಿಳಿಸಿವೆ.