‘ಸಚಿವ ಆರ್. ಅಶೋಕ್ ಕಡೆಯವರು ಎಂದಿದ್ದಕ್ಕೆ ತಕ್ಷಣವೇ ಅಪಘಾತದಲ್ಲಿ ಗಾಯಗೊಂಡಿದ್ದ ಎಲ್ಲರಿಗೂ ಚಿಕಿತ್ಸೆಗೆ ವ್ಯವಸ್ಥೆ ಮಾಡಿದ್ದೆವು. ಸಚಿನ್ ಅವರ ಮೃತದೇಹವನ್ನು ಬೇಗ ಬೆಂಗಳೂರಿಗೆ ತೆಗೆದುಕೊಂಡು ಹೋಗಬೇಕು ಎಂದು ಒತ್ತಡ ಹೇರಿದ್ದಕ್ಕೆ ರಾತ್ರಿಯೇ ಮರಣೋತ್ತರ ಪರೀಕ್ಷೆ ಮಾಡಿ ಕಳುಹಿಸಿಕೊಟ್ಟೆವು. ರಾಕೇಶ್ ಎಂಬುವರ ಬೆನ್ನು ಮೂಳೆ ಮುರಿದರೆ, ಶಿವಕುಮಾರ, ರಾಹುಲ್ ಹಾಗೂ ವರುಣ್ಗೆ ಸಣ್ಣ ಗಾಯಗಳಾಗಿದ್ದವು. ಎಲ್ಲರಿಗೂ ಪ್ರಾಥಮಿಕ ಚಿಕಿತ್ಸೆ ನೀಡಿದ್ದೆವು. ಬೆಳಿಗ್ಗೆ ಹೋಗುವಂತೆ ತಿಳಿಸಿದ್ದರೂ ಅವರು ರಾತ್ರಿಯೇ ಅವಸರದಲ್ಲಿ ಹೊರಟು ಹೋದರು’ ಎಂದು ಡಾ. ಮಹಾಂತೇಶ್ ತಿಳಿಸಿದ್ದಾರೆ.