ಈ ಬಗ್ಗೆ ಸರಣಿ ಟ್ವೀಟ್ ಮಾಡಿರುವ ಅವರು, ನೂರಾರು ಮಂದಿ ಒಂದೆಡೆ ಸೇರಬಾರದು ಎಂದು ಸರ್ಕಾರ ಹೇಳುತ್ತಿದೆ. ಹಾಗಿರುವಾಗ ಜನಪ್ರತಿನಿಧಿಗಳು, ಅಧಿಕಾರಿಗಳು, ಪತ್ರಕರ್ತರು ಒಂದೇ ಕಡೆ ಕಲೆಯುವ ಅಧಿವೇಶನ ನಡೆಸುವುದು ಸದ್ಯದ ಪರಿಸ್ಥಿತಿಯಲ್ಲಿ ಸರಿಯಲ್ಲ. ಸರ್ಕಾರ ಹೇಳುವುದೊಂದು ಮಾಡುವುದೊಂದು ಎಂಬ ಟೀಕೆಗೆ ಗುರಿಯಾಗುವ ಮುನ್ನ ಅಧಿವೇಶನ ಮುಂದೂಡುವ ಕೆಲಸ ಮಾಡಲಿ ಎಂದು ಸಲಹೆ ನೀಡಿದ್ದಾರೆ.