ಬೆಂಗಳೂರು: ಕೋವಿಡ್ ಸೋಂಕಿತರ ಚಿಕಿತ್ಸೆಗೆ ಬಳಸುವ ಪಿಪಿಇ ಕಿಟ್ಗಳನ್ನು ವೈಜ್ಞಾನಿಕವಾಗಿ ವಿಲೇವಾರಿ ಮಾಡಬೇಕು ಎಂದು ಆರೋಗ್ಯ ಸಚಿವ ಶ್ರೀರಾಮುಲು ತಾಕೀತು ಮಾಡಿದ್ದಾರೆ.
ಈ ಕುರಿತು ಟ್ವೀಟ್ ಮಾಡಿರುವ ಅವರು, ಕಿಟ್ಗಳನ್ನುಎಲ್ಲೆಂದರಲ್ಲಿ ಬಿಸಾಕುತ್ತಿರುವುದು ಕಂಡುಬಂದರೆ, ಅಂಥವರ ವಿರುದ್ಧ ಮುಲಾಜಿಲ್ಲದೇ ಅತ್ಯಂತ ಕಠಿಣ ಕ್ರಮ ತೆಗೆದುಕೊಳ್ಳಲಾಗುವುದು ಎಂದು ಎಚ್ಚರಿಸಿದ್ದಾರೆ.
'ಯಾರೋ ಕೆಲವರ ನಿರ್ಲಕ್ಷ್ಯ ಜನಸಾಮಾನ್ಯರ ಪ್ರಾಣಕ್ಕೆ ಕಂಟಕವಾಗಬಾರದು. ಸಂಬಂಧಿಸಿದ ಅಧಿಕಾರಿಗಳೇ ಇದಕ್ಕೆ ಹೊಣೆಗಾರರು' ಎಂದು ಹೇಳಿದ್ದಾರೆ.
#ಕೋವಿಡ್ ಸೋಂಕಿತರ ಚಿಕಿತ್ಸೆಗೆ ಬಳಸುವ ಪಿಪಿಇ ಕಿಟ್ ಗಳನ್ನು ವೈಜ್ಞಾನಿಕವಾಗಿ ವಿಲೇವಾರಿ ಮಾಡದೇ ಎಲ್ಲೆಂದರಲ್ಲಿ ಬಿಸಾಕುತ್ತಿರುವುದು ಕಂಡುಬಂದರೆ,
ಅಂಥವರ ವಿರುದ್ಧ ಮುಲಾಜಿಲ್ಲದೇ ಅತ್ಯಂತ ಕಠಿಣ ಕ್ರಮ ತೆಗೆದುಕೊಳ್ಳಲಾಗುವುದು ಯಾರೋ ಕೆಲವರ ನಿರ್ಲಕ್ಷ್ಯ ಜನಸಾಮಾನ್ಯರ ಪ್ರಾಣಕ್ಕೆ ಕಂಟಕವಾಗಬಾರದು. ಸಂಬಂಧಿಸಿದ ಅಧಿಕಾರಿಗಳೇ ಇದಕ್ಕೆ ಹೊಣೆಗಾರರು.