‘ಸಮುದಾಯಕ್ಕೆ ನೆರವಾಗುವ ಉದ್ದೇಶದಿಂದ ಜಾನುವಾರು ಸೆಗಣಿ, ಹಸಿ ಕಸ ಹೆಚ್ಚು ಉತ್ಪತ್ತಿಯಾಗುವ ಗೋಶಾಲೆ, ಮಠ, ಅನ್ನಛತ್ರ ಇಂತಹ ಸ್ಥಳಗಳಿಗೆ ಆದ್ಯತೆ ನೀಡಲಾಗಿದೆ. ಅಲ್ಲಿ ಲಭ್ಯವಾಗುವ ತ್ಯಾಜ್ಯ ಆಧರಿಸಿ, 60 ಕ್ಯೂಬಿಕ್ ಮೀಟರ್ ಗಾತ್ರದ ₹ 14.5 ಲಕ್ಷ ವೆಚ್ಚದ ಗೋಬರ್ ಗ್ಯಾಸ್ ಘಟಕಕ್ಕೆ ಯೋಜನೆ ರೂಪಿಸಲಾಗಿದೆ. ಶೇ 50:50 ಅನುಪಾತದಲ್ಲಿ ಯೋಜನಾ ವೆಚ್ಚ ಭರಿಸಲಾಗುತ್ತದೆ’ ಎಂದು ಸ್ವಚ್ಛ ಭಾರತ ಮಿಷನ್ನ ಮಾನವ ಸಂಪನ್ಮೂಲ ಅಭಿವೃದ್ಧಿ ಸಮಾಲೋಚಕ ಸೂರ್ಯನಾರಾಯಣ ಭಟ್ಟ ತಿಳಿಸಿದರು.