<p><strong>ಹುಬ್ಬಳ್ಳಿ:</strong> ಮೈತ್ರಿ ಸರ್ಕಾರದ ಅಸ್ಥಿರತೆಯ ಹಿಂದೆ ಸಿದ್ದರಾಮಯ್ಯ ಕೈವಾಡವಿದ್ದು, ದೇವೇಗೌಡರ ಕುಟುಂಬ ಅಧಿಕಾರದಲ್ಲಿರೋದು ಅವರಿಗೆ ಇಷ್ಟವಿಲ್ಲ ಎಂದು ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಹೇಳಿದರು.</p>.<p>ಶಾಸಕರ ರಾಜೀನಾಮೆ, ಕಾಂಗ್ರೆಸ್ ಮುಖಂಡರ ಹೇಳಿಕೆಗಳ ಹಿಂದಿನ ಸೂತ್ರದಾರ ಸಿದ್ದರಾಮಯ್ಯ, ಮೈತ್ರಿ ಸರ್ಕಾರದಲ್ಲಿ ಜಿ.ಪರಮೇಶ್ವರ ಅವರಿಗೆ ನಾಯಕತ್ವ ಸಿಗುತ್ತಿದೆ ಎಂಬ ಆತಂಕ ಅವರಿಗಿದೆ ಎಂದು ಟೀಕಿಸಿದರು.</p>.<p>ಸಿದ್ದರಾಮಯ್ಯ ಅವರ ಬಜೆಟ್ ಪ್ರತಿಕ್ರಿಯೆಗೆ ಪ್ರತಿಕ್ರಿಯಿಸಿದ ಅವರು, ಕೃಷಿ ಕ್ಷೇತ್ರವನ್ನು ಕಡೆಗಣಿಸಿಲ್ಲ, ಅವರು ಬಜೆಟ್ ಪೂರ್ಣವಾಗಿ ಓದಿಲ್ಲ ಎಂದು ಭಾವಿಸಿದ್ದೇನೆ ಎಂದರು.</p>.<p>ಉದ್ಯೋಗ ಖಾತ್ರಿ ಯೋಜನೆಗೆ 60 ಸಾವಿರ ಕೋಟಿ ಅನುದಾನ ಒದಗಿಸಲಾಗಿದೆ. ಯುಪಿಎ ಸರ್ಕಾರ ಇದ್ದಾಗ 46 ಸಾವಿರ ಕೋಟಿ ನೀಡಿದ್ದರು ಎಂದರು.</p>.<p>ಮುಂದಿನ 10 ವರ್ಷ ದೇಶ ಯಾವದಿಕ್ಕಿನಲ್ಲಿ ನಡೆಯಬೇಕು ಎಂಬುದನ್ನು ಬಜೆಟ್ ಬಿಂಬಿಸುತ್ತಿದೆ. ಇದೊಂದು ದೂರದೃಷ್ಟಿಯ ಬಜೆಟ್. ಸಾಮಾನ್ಯ ಜನರನ್ನ ದೃಷ್ಟಿಯಲ್ಲಿಟ್ಟುಕೊಂಡ ಬಜೆಟ್ ರೂಪಿಸಲಾಗಿದೆ ಎಂದುಪ್ರಹ್ಲಾದ ಜೋಶಿ ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹುಬ್ಬಳ್ಳಿ:</strong> ಮೈತ್ರಿ ಸರ್ಕಾರದ ಅಸ್ಥಿರತೆಯ ಹಿಂದೆ ಸಿದ್ದರಾಮಯ್ಯ ಕೈವಾಡವಿದ್ದು, ದೇವೇಗೌಡರ ಕುಟುಂಬ ಅಧಿಕಾರದಲ್ಲಿರೋದು ಅವರಿಗೆ ಇಷ್ಟವಿಲ್ಲ ಎಂದು ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಹೇಳಿದರು.</p>.<p>ಶಾಸಕರ ರಾಜೀನಾಮೆ, ಕಾಂಗ್ರೆಸ್ ಮುಖಂಡರ ಹೇಳಿಕೆಗಳ ಹಿಂದಿನ ಸೂತ್ರದಾರ ಸಿದ್ದರಾಮಯ್ಯ, ಮೈತ್ರಿ ಸರ್ಕಾರದಲ್ಲಿ ಜಿ.ಪರಮೇಶ್ವರ ಅವರಿಗೆ ನಾಯಕತ್ವ ಸಿಗುತ್ತಿದೆ ಎಂಬ ಆತಂಕ ಅವರಿಗಿದೆ ಎಂದು ಟೀಕಿಸಿದರು.</p>.<p>ಸಿದ್ದರಾಮಯ್ಯ ಅವರ ಬಜೆಟ್ ಪ್ರತಿಕ್ರಿಯೆಗೆ ಪ್ರತಿಕ್ರಿಯಿಸಿದ ಅವರು, ಕೃಷಿ ಕ್ಷೇತ್ರವನ್ನು ಕಡೆಗಣಿಸಿಲ್ಲ, ಅವರು ಬಜೆಟ್ ಪೂರ್ಣವಾಗಿ ಓದಿಲ್ಲ ಎಂದು ಭಾವಿಸಿದ್ದೇನೆ ಎಂದರು.</p>.<p>ಉದ್ಯೋಗ ಖಾತ್ರಿ ಯೋಜನೆಗೆ 60 ಸಾವಿರ ಕೋಟಿ ಅನುದಾನ ಒದಗಿಸಲಾಗಿದೆ. ಯುಪಿಎ ಸರ್ಕಾರ ಇದ್ದಾಗ 46 ಸಾವಿರ ಕೋಟಿ ನೀಡಿದ್ದರು ಎಂದರು.</p>.<p>ಮುಂದಿನ 10 ವರ್ಷ ದೇಶ ಯಾವದಿಕ್ಕಿನಲ್ಲಿ ನಡೆಯಬೇಕು ಎಂಬುದನ್ನು ಬಜೆಟ್ ಬಿಂಬಿಸುತ್ತಿದೆ. ಇದೊಂದು ದೂರದೃಷ್ಟಿಯ ಬಜೆಟ್. ಸಾಮಾನ್ಯ ಜನರನ್ನ ದೃಷ್ಟಿಯಲ್ಲಿಟ್ಟುಕೊಂಡ ಬಜೆಟ್ ರೂಪಿಸಲಾಗಿದೆ ಎಂದುಪ್ರಹ್ಲಾದ ಜೋಶಿ ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>